ಈ ಮಳೆಗಾಲದ ಅಮೋಘ ತಾಳಮದ್ದಳೆ ಪ್ರದರ್ಶನ ಮೂಡಬಿದಿರೆಯ ಸಮಾಜ ಮಂದಿರದಲ್ಲಿ ನಡೆಯಲಿದೆ. ತಾಳಮದ್ದಳೆ ಕ್ಷೇತ್ರದ ಪ್ರಸಿದ್ಧ ಕಲಾವಿದರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಯಕ್ಷಸಂಗಮ ಮೂಡಿಬಿದಿರೆ ಇವರು ಸಮಾಜ ಮಂದಿರ ಸಭಾ ಇವರ ಸಹಯೋಗದೊಂದಿಗೆ ಈ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ.
ದಿನಾಂಕ 23.07.2022ನೇ ಶನಿವಾರ ರಾತ್ರಿ ಘಂಟೆ 9ಕ್ಕೆ ಸರಿಯಾಗಿ ತಾಳಮದ್ದಳೆ ಆರಂಭವಾಗಲಿದೆ.
ದಮಯಂತಿ ಪುನಃ ಸ್ವಯಂವರ, ರಾವಣ ವಧೆ ಎಂಬ ಪ್ರಸಂಗದಲ್ಲಿ ಪ್ರಸಿದ್ಧ ಕಲಾವಿದರೇ ಅರ್ಥಧಾರಿಗಳಾಗಿ ಕಾಣಿಸಿಕೊಳ್ಳಲಿದ್ದಾರೆ.
ಕಲಾವಿದರಾದ ಸುಣ್ಣಂಬಳ ವಿಶ್ವೇಶ್ವರ ಭಟ್ ಮತ್ತು ತಾರಾನಾಥ ವರ್ಕಾಡಿ ಇವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಗುವುದು ಎಂದು ಕಾರ್ಯಕ್ರಮದ ಆಯೋಜಕರು ತಿಳಿಸಿದ್ದಾರೆ. ಕಾರ್ಯಕ್ರಮದ ವಿವರಗಳಿಗೆ ಚಿತ್ರ ನೋಡಿ.