ರಾಪರ್ ಸಮೇತ ಚಾಕಲೇಟ್ ತಿಂದು 6 ವರ್ಷದ ಬಾಲಕಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಬಿಜೂರು ಗ್ರಾಮ ಪಂಚಾಯತಿನಲ್ಲಿರುವ ಬವಳಾಡಿ ಗ್ರಾಮದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿನಿ ಸಮನ್ವಿ (6) ಅಲ್ಲಿಯ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಎರಡನೆಯ ತರಗತಿಯ ವಿದ್ಯಾರ್ಥಿನಿ. ಇಂದು ಬುಧವಾರ ಬೆಳಿಗ್ಗೆ ಶಾಲೆಗೆ ಹೊರಡಲು ಅನುಮಾನಿಸುತ್ತಿದ್ದ ಮಗಳನ್ನು ಸಮಾಧಾನಿಸಲು ಆಕೆಯ ಇಚ್ಛೆಯಂತೆ ಅವಳಮ್ಮ ಚಾಕಲೇಟ್ ಕೊಟ್ಟಿದ್ದರು.
ಅಷ್ಟರಲ್ಲಿ ಶಾಲೆಗೆ ಹೋಗುವ ಬಸ್ ಬಂದುದರಿಂದ ಅವಸರದಿಂದ ಚಾಕಲೇಟ್ ಕವರ್ ಸಮೇತ ಬಾಯಿಗೆ ಹಾಕಿದ್ದ ಸಮನ್ವಿಯ ಗಂಟಲಲ್ಲಿ ಅದು ಸಿಕ್ಕಿಹಾಕಿಕೊಂಡಿತ್ತು. ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಕೂಡಲೇ ಬೈಂದೂರಿನ ಆಸ್ಪತ್ರೆಗೆ ಸೇರಿಸಲಾಯಿತು.
ಅಲ್ಲಿ ಗಂಟಲಲ್ಲಿದ್ದ ಚಾಕಲೇಟ್ ಹೊರತೆಗೆದಿದ್ದರೂ ಮಗುವಿನ ಪ್ರಾಣ ಉಳಿಸಲು ಸಾಧ್ಯವಾಗಿರಲಿಲ್ಲ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು ಮುಂದಿನ ತನಿಖೆ ನಡೆಯುತ್ತಿದೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

