ಅಧ್ಯಕ್ಷರ ಚುನಾವಣಾ ಫಲಿತಾಂಶವನ್ನು ನಿರ್ಧರಿಸುವಲ್ಲಿ ,ಇಂದು ಬೆಳಗ್ಗೆ 11 ಗಂಟೆಗೆ ಮತಗಳ ಎಣಿಕೆ ನಡೆಯಲಿದ್ದು ದ್ರೌಪದಿ ಮುರ್ಮು, ಯಶವಂತ ಸಿನ್ಹಾ ಕಣದಲ್ಲಿದ್ದಾರೆ.
ಜುಲೈ 18 ರಂದು ನಡೆದ ರಾಷ್ಟ್ರಪತಿ ಚುನಾವಣೆಯಲ್ಲಿ 771 ಸಂಸದರು ಮತ್ತು 4025 ಶಾಸಕರನ್ನು ಒಳಗೊಂಡ ಮತದಾನದಲ್ಲಿ 99% ಕ್ಕೂ ಹೆಚ್ಚು ಮಂದಿ ಮತ ಚಲಾಯಿಸಿದ್ದಾರೆ.
ಈ ಚುನಾವಣೆಯು NDA ಯ ದ್ರೌಪದಿ ಮುರ್ಮು ಮತ್ತು ಜಂಟಿ ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ನಡುವಿನ ನೇರ ಮುಖಾಮುಖಿಯಾಗಿತ್ತು. ಇಂದು ಬೆಳಗ್ಗೆ 11 ಗಂಟೆಗೆ ಮತ ಎಣಿಕೆ ಆರಂಭವಾಗಲಿದೆ.
ದ್ರೌಪದಿ ಮುರ್ಮು ಗೆದ್ದರೆ ಭಾರತದ ರಾಷ್ಟ್ರಪತಿಯಾಗುವ ಮೊದಲ ಬುಡಕಟ್ಟು ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.