ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಮತ್ತು ಸಂತ ವಿಕ್ಟರ್ಸ್ ಬಾಲಿಕಾ ಪ್ರೌಢಶಾಲೆ ಪುತ್ತೂರು ಇದರ ಆಶ್ರಯದಲ್ಲಿ ಜುಲೈ 22ರಂದು ನಡೆದ ಪುತ್ತೂರು ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಒಟ್ಟು 9 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
14 ವಯೋಮಾನದ ಬಾಲಕರ ವಿಭಾಗದಲ್ಲಿ ಪ್ರಾಪ್ತ್ ಆರ್.ಎನ್ (8ನೇ ತರಗತಿ) ಪ್ರಥಮ ಸ್ಥಾನ, ಬಾಲಕಿಯರ ವಿಭಾಗದಲ್ಲಿವಂಶಿ ರೈ (6ನೇ ತರಗತಿ) ತೃತೀಯ ಸ್ಥಾನ, 17ರ ವಯೋಮಾನದ ಬಾಲಕರ ವಿಭಾಗದಲ್ಲಿ ಶಿವ ಕುಮಾರ್ (10ನೇ ತರಗತಿ) ಪ್ರಥಮ,
ಪೃಥ್ವಿರಾಜ್ ಪ್ರಭು (10ನೇ ತರಗತಿ) ಪ್ರಥಮ ಸ್ಥಾನ, ಲಿಖಿತ್ ಪಿ (10ನೇ ತರಗತಿ) ಪ್ರಥಮ ಸ್ಥಾನ, ಪ್ರಮತ್.ಎಂ. ಭಟ್(9 ನೇ ತರಗತಿ) ಪ್ರಥಮ ಸ್ಥಾನ, ಮಹಮ್ಮದ್ ರಿಹಾನ್ (9 ನೇ ತರಗತಿ) ಅದ್ದೈತ್ ಶರ್ಮ (10ನೇ ತರಗತಿ) ಪ್ರಥಮ ಸ್ಥಾನ, ವಿಶಾಲ್ ಪಿ (9ನೇ ತರಗತಿ) ಪ್ರಥಮ ಸ್ಥಾನ,
ಬಾಲಕಿಯರ ವಿಭಾಗದಲ್ಲಿ ತೃಪ್ತಿ ಎ.ಕೆ (10 ನೇತರಗತಿ) ಪ್ರಥಮ ಸ್ಥಾನ ಗಳಿಸಿರುತ್ತಾರೆ. ಇವರು ಜುಲೈ 27ರಂದು ಬೆಳ್ತಂಗಡಿ ತಾಲೂಕಿನ ವಾಣಿ ಆಂಗ್ಲ ಮಾಧ್ಯಮ ಶಾಲೆ ಹಳೆಕೋಟೆ ಇಲ್ಲಿ ನಡೆಯುವ ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸತೀಶ್ ಕುಮಾರ್ ರೈ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
- 7th Standard, English – Unit 1 Prose – A Tiger in the House
- 7th Standard, Social – HISTORY CHAPTER 1 – MAJOR DEVELOPMENTS IN THE WORLD
- 6th Standard, Social Science – HISTORY – Chapter 1 – INTRODUCTION TO HISTORY AND PRE-HISTORIC SOCIETY
- 9th English, UNIT 9 PROSE – AN ASTROLOGER’S DAY
- 9th Standard English POEM 10 – PHOTOGRAPH