ಉಡಪಿ : ಎಮ್.ಸುಧಾಕರ ರಾವ್(84 ವರ್ಷ)ಅಲ್ಪಕಾಲದ ಅಸೌಖ್ಯದಿಂದ ಮಣಿಪಾಲದ ಕೆ.ಎಂ. ಸಿ. ಆಸ್ಪತ್ರೆಯಲ್ಲಿ ಇಂದು(25-07-2022) ಪೂರ್ವಾಹ್ನ 8.30ಕ್ಕೆ ನಿಧನರಾದರು.
ಬೀಡಿನಗುಡ್ಡೆಯಲ್ಲಿ ಇಂದು ಮಧ್ಯಾಹ್ನ ಅವರ ಅಂತ್ಯಕ್ರಿಯೆ ನೆರವೇರಿತು. ಉಡುಪಿ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಮೂವತ್ತೇಳು ವರ್ಷಗಳ ಕಾಲ ಉಪನ್ಯಾಸಕರಾಗಿ, ಒಂದು ವರ್ಷ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದರು.
ಜೀವಶಾಸ್ತ್ರದ ಬಗ್ಗೆ ಅಪಾರ ಪಾಂಡಿತ್ಯವನ್ನು ಹೊಂದಿದ ಸುಧಾಕರ್ ರಾಯರು ಬರೆದ ಪುಸ್ತಕ ಪದವಿಪೂರ್ವ ವಿದ್ಯಾರ್ಥಿಗಳಿಗೆ ಪಠ್ಯವಾಗಿ, ಶಿಕ್ಷಣ ಕ್ಷೇತ್ರದಲ್ಲಿ ತುಂಬಾ ಪ್ರಸಿದ್ಧವಾಗಿದೆ.
ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಮತ್ತು ಅಪಾರ ಶಿಷ್ಯವೃಂದವನ್ನು ಅಗಲಿದ್ದಾರೆ.
ಇವರ ನಿಧನಕ್ಕೆ ಕಾಲೇಜಿನ ಪ್ರಾಂಶುಪಾಲ ಡಾ.ಎ. ರಾಘವೇಂದ್ರ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷಡಾ. ಬಿ.ಎಮ್ .ಸೋಮಯಾಜಿ, ಕಾರ್ಯದರ್ಶಿ ತೇಜಸ್ವಿ ಶಂಕರ್ ಹಾಗೂ ಅಪಾರ ಸಂಖ್ಯೆಯ ಶಿಷ್ಯರು ಸಂತಾಪ ವ್ಯಕ್ತ ಪಡಿಸಿದ್ದಾರೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

