ಉಡುಪಿ : ನಿಟ್ಟೂರು ಪ್ರೌಢಶಾಲೆಯ ಪ್ರತಿಭಾನ್ವಿತ ಬಡ ವಿದ್ಯಾರ್ಥಿಗಳಿಗೆ ಬೆಂಗಳೂರಿನ ಪಿ.ಎಲ್. ಅಣ್ಣಾಜಿ ರಾವ್ ಸ್ಮಾರಣಾರ್ಥ ಅವರ ಸುಪುತ್ರ ಪಿ.ಎಲ್.ಎನ್. ರಾವ್ ಇವರ ಪ್ರಾಯೋಜಕತ್ವದಲ್ಲಿ 40 ವಿದ್ಯಾರ್ಥಿಗಳಿಗೆ ತಲಾ ಒಂದು ಸಾವಿರ ರೂಪಾಯಿಯಂತೆ ಒಟ್ಟು 40000/- ರೂಪಾಯಿ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ದಿನಾಂಕ 22-07-2022ರಂದು ಶಾಲಾ ಸಭಾಂಗಣದಲ್ಲಿ ಜರಗಿತು.
ನಿಟ್ಟೂರು ಎಜುಕೇಶನಲ್ ಸೊಸೈಟಿಯ ಕಾರ್ಯದರ್ಶಿ ನಿವೃತ್ತ ಮುಖ್ಯೋಪಾಧ್ಯಾಯ ಮುರಲಿ ಕಡೆಕಾರ್ ವಿದ್ಯಾರ್ಥಿವೇತನ ವಿತರಣೆ ಮಾಡಿ ಶುಭ ಹಾರೈಸಿದರು ಮುಖ್ಯ ಅಭ್ಯಾಗತರಾಗಿ ನಿಟ್ಟೂರು ಪ್ರೌಢಶಾಲೆಯ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಯೋಗಿಶ್ಚಂದ್ರಧರ, ನಿಟ್ಟೂರು ಎಜುಕೇಶನಲ್ ಸೊಸೈಟಿಯ ಜೊತೆಕಾರ್ಯದರ್ಶಿ ದಿನೇಶ್ ಪಿ. ಪೂಜಾರಿ, ಹಳೆವಿದ್ಯಾರ್ಥಿ ಪರಶುರಾಮ ಶೆಟ್ಟಿ, ನಿವೃತ್ತ ಅಧ್ಯಾಪಕ ಎಚ್.ಎನ್. ಶೃಂಗೇಶ್ವರ ಉಪಸ್ಥಿತರಿದ್ದರು.
ಮುಖ್ಯೋಪಾಧ್ಯಾಯಿನಿ ಅನಸೂಯ ಸ್ವಾಗತಿಸಿದರು. ಶಿಕ್ಷಕ ದೇವದಾಸ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಶಿಕ್ಷಕ-ರಕ್ಷಕ ಸಂಘದ ಸಂಯೋಜಕ ರಾಮದಾಸ್ ನಾಯ್ಕ್ ವಂದಿಸಿದರು.
- ನಾಳೆ ದಿನಾಂಕ 06.07.2024 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಖಾಸಗಿ ಮತ್ತು ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ
- ಖ್ಯಾತ ಯಕ್ಷಗಾನ ವೇಷಧಾರಿ ಕುಂಬಳೆ ಶ್ರೀಧರ ರಾವ್ ಇನ್ನಿಲ್ಲ – ಕುಂಬಳೆ ಶ್ರೀಧರ ರಾಯರ ಕಲಾಜೀವನದ ಮೇಲೊಂದು ಇಣುಕು ನೋಟ
- ಖ್ಯಾತ ಯಕ್ಷಗಾನ ಪ್ರಸಾದನ ತಜ್ಞ, ವೇಷಭೂಷಣಗಳ ನಿರ್ಮಾಪಕ ನಿಧನ
- ಉಚಿತ ಆಯುರ್ವೇದ ವೈದ್ಯಕೀಯ ಶಿಬಿರ
- ಶ್ರೀಮತಿ ಪರಿಣಯ, ಇಂದ್ರಕೀಲಕ, ಉತ್ತರ ಗೋಗ್ರಹಣ, ಶರಸೇತು ಬಂಧನ – ಕಟೀಲಿನಲ್ಲಿ ನಾಲ್ಕು ದಿನಗಳಲ್ಲಿ ನಾಲ್ಕು ಯಕ್ಷಗಾನ ಪ್ರದರ್ಶನಗಳು