ಉಡುಪಿ : ನಿಟ್ಟೂರು ಪ್ರೌಢಶಾಲೆಯ ಪ್ರತಿಭಾನ್ವಿತ ಬಡ ವಿದ್ಯಾರ್ಥಿಗಳಿಗೆ ಬೆಂಗಳೂರಿನ ಪಿ.ಎಲ್. ಅಣ್ಣಾಜಿ ರಾವ್ ಸ್ಮಾರಣಾರ್ಥ ಅವರ ಸುಪುತ್ರ ಪಿ.ಎಲ್.ಎನ್. ರಾವ್ ಇವರ ಪ್ರಾಯೋಜಕತ್ವದಲ್ಲಿ 40 ವಿದ್ಯಾರ್ಥಿಗಳಿಗೆ ತಲಾ ಒಂದು ಸಾವಿರ ರೂಪಾಯಿಯಂತೆ ಒಟ್ಟು 40000/- ರೂಪಾಯಿ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ದಿನಾಂಕ 22-07-2022ರಂದು ಶಾಲಾ ಸಭಾಂಗಣದಲ್ಲಿ ಜರಗಿತು.
ನಿಟ್ಟೂರು ಎಜುಕೇಶನಲ್ ಸೊಸೈಟಿಯ ಕಾರ್ಯದರ್ಶಿ ನಿವೃತ್ತ ಮುಖ್ಯೋಪಾಧ್ಯಾಯ ಮುರಲಿ ಕಡೆಕಾರ್ ವಿದ್ಯಾರ್ಥಿವೇತನ ವಿತರಣೆ ಮಾಡಿ ಶುಭ ಹಾರೈಸಿದರು ಮುಖ್ಯ ಅಭ್ಯಾಗತರಾಗಿ ನಿಟ್ಟೂರು ಪ್ರೌಢಶಾಲೆಯ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಯೋಗಿಶ್ಚಂದ್ರಧರ, ನಿಟ್ಟೂರು ಎಜುಕೇಶನಲ್ ಸೊಸೈಟಿಯ ಜೊತೆಕಾರ್ಯದರ್ಶಿ ದಿನೇಶ್ ಪಿ. ಪೂಜಾರಿ, ಹಳೆವಿದ್ಯಾರ್ಥಿ ಪರಶುರಾಮ ಶೆಟ್ಟಿ, ನಿವೃತ್ತ ಅಧ್ಯಾಪಕ ಎಚ್.ಎನ್. ಶೃಂಗೇಶ್ವರ ಉಪಸ್ಥಿತರಿದ್ದರು.
ಮುಖ್ಯೋಪಾಧ್ಯಾಯಿನಿ ಅನಸೂಯ ಸ್ವಾಗತಿಸಿದರು. ಶಿಕ್ಷಕ ದೇವದಾಸ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಶಿಕ್ಷಕ-ರಕ್ಷಕ ಸಂಘದ ಸಂಯೋಜಕ ರಾಮದಾಸ್ ನಾಯ್ಕ್ ವಂದಿಸಿದರು.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

