Friday, September 20, 2024
Homeಸುದ್ದಿಕೊಲೆಗಡುಕರು ಕೇರಳಕ್ಕೆ ಪರಾರಿ ಶಂಕೆ - ಪ್ರವೀಣ್ ನೆಟ್ಟಾರ್ ಹತ್ಯೆ ಕೇಸ್ 

ಕೊಲೆಗಡುಕರು ಕೇರಳಕ್ಕೆ ಪರಾರಿ ಶಂಕೆ – ಪ್ರವೀಣ್ ನೆಟ್ಟಾರ್ ಹತ್ಯೆ ಕೇಸ್ 

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಕೊಲೆಗಡುಕರು ಕೇರಳಕ್ಕೆ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಈ ಕುರಿತು ಶಂಕೆ ವ್ಯಕ್ತಪಡಿಸಿದ್ದಾರೆ. 

“ಈ ಘಟನೆ ಕೇರಳ ಗಡಿಯ ಸಮೀಪ ನಡೆದಿರುವುದರಿಂದ ನಮ್ಮ ಪೊಲೀಸರು ಕೇರಳ ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದಾರೆ. ಕರ್ನಾಟಕ ಡಿಜಿಪಿ ಅವರು ಕೇರಳ ಸಹೋದ್ಯೋಗಿಯೊಂದಿಗೆ ಮಾತನಾಡಲಿದ್ದು, ಮಂಗಳೂರು ಎಸ್ಪಿ ಕಾಸರಗೋಡು ಎಸ್ಪಿ ಅವರೊಂದಿಗೆ ಮಾತನಾಡಿದ್ದಾರೆ. ಇದು ಪೂರ್ವ ಯೋಜಿತ ಘಟನೆಯಂತೆ ಕಾಣುತ್ತಿದ್ದು ಇತರ ಪ್ರಕರಣಗಳಿಗೆ ಹೋಲಿಕೆಯಿದೆ” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

 “ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಆರೋಪಿಗಳು ಕೇರಳಕ್ಕೆ ಓಡಿ ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಅಲ್ಲಿನ ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದೇವೆ. ಹತ್ಯೆ ರಾಜಕೀಯ ಪ್ರೇರಿತವೇ ಅಥವಾ ಬೇರೆ ಕಾರಣವೇ ಎಂಬುದನ್ನು ತನಿಖೆಯಿಂದ ಬಹಿರಂಗಪಡಿಸಬೇಕು” ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments