ರಂಗಭೂಮಿ,ಯಕ್ಷಗಾನ ಹಾಗೂ ಚಲನ ಚಿತ್ರ ಕಲಾವಿದರು ಹಾಗೂ ಕಲಾ ಪೋಷಕರೂ ಆದ ದೇವರಾಜ ಕರಬರವರ ನಿರ್ದೇಕಶಕತ್ವದ ಕರಬ ಪ್ರತಿಷ್ಠಾನ ಸಂಸ್ಥೆಯು ತನ್ನ ವಾರ್ಷಿಕೋತ್ಸವದ ಅಂಗವಾಗಿ ಕಲೋತ್ಸವ-2022 ಶೀರ್ಷಿಕೆ ಅಡಿಯಲ್ಲಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದು
ಈ ಸಲುವಾಗಿ ಇದೇ ಬರುವ ಶನಿವಾರ ದಿನಾಂಕ 06-08-2022 ರಂದು ಸಂಜೆ 5-30 ಕ್ಕೆ ಬೆಂಗಳೂರಿನ ಉಲ್ಲಾಳ ಉಪನಗರ ಸಮೀಪದ ವಿಶ್ವೇಶ್ವರಯ್ಯ ಬಡಾವಣೆಯ 4 ನೇ ಬ್ಲಾಕ್ ನಲ್ಲಿರುವ ಕಲಾಗುಡಿಯಲ್ಲಿ ಡಾ.ರಾಧಾಕೃಷ್ಣ ಉರಾಳರ ನಿರ್ದೇಕಶಕತ್ವದ ಕಲಾಕದಂಬ ಆರ್ಟ್ ಸೆಂಟರ್ ನ ಕಲಾವಿದರಿಂದ
‘ಭಾಮ ಕಲಾಪ’ ಎಂಬ ಯಕ್ಷಗಾನ ಪ್ರದರ್ಶನ ಹಮ್ಮಿ ಕೊಂಡಿದ್ದು ಈ ಒಂದು ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಾಯೋಜಿಸುತ್ತಿದೆ.
ಬೆಂಗಳೂರಿನ ರಾಮಸಂದ್ರ ಶಾಖೆಯ ಕರ್ನಾಟಕ ಬ್ಯಾಂಕ್ ನ ಮ್ಯಾನೇಜರ್ ಶ್ರೀ ರಾಘವೇಂದ್ರ ಕಾಮತ್,ಸಮಾಜ ಸೇವಕರಾದ ಶ್ರೀ ಪದ್ಮನಾಭ ಭರಣಿ ಹಾಗೂ ಮಾಜಿ ನಗರಪಾಲಿಕೆ ಸದಸ್ಯರು ಸಮಾಜ ಸೇವಕರು ಆದ ಶ್ರೀ ಮಂಜುನಾಥ ಸಿ.ಎಮ್ ಹಾಗೂ ಕರಬ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀ ದೇವರಾಜ ಕರಬರವರು ಮುಖ್ಯ ಅತಿಥಿಗಳಾಗಿ ಈ ಒಂದು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 9886066732, 9448510582 ಸಂಪರ್ಕಿಸ ಬಹುದು.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ