ರಂಗಭೂಮಿ,ಯಕ್ಷಗಾನ ಹಾಗೂ ಚಲನ ಚಿತ್ರ ಕಲಾವಿದರು ಹಾಗೂ ಕಲಾ ಪೋಷಕರೂ ಆದ ದೇವರಾಜ ಕರಬರವರ ನಿರ್ದೇಕಶಕತ್ವದ ಕರಬ ಪ್ರತಿಷ್ಠಾನ ಸಂಸ್ಥೆಯು ತನ್ನ ವಾರ್ಷಿಕೋತ್ಸವದ ಅಂಗವಾಗಿ ಕಲೋತ್ಸವ-2022 ಶೀರ್ಷಿಕೆ ಅಡಿಯಲ್ಲಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದು
ಈ ಸಲುವಾಗಿ ಇದೇ ಬರುವ ಶನಿವಾರ ದಿನಾಂಕ 06-08-2022 ರಂದು ಸಂಜೆ 5-30 ಕ್ಕೆ ಬೆಂಗಳೂರಿನ ಉಲ್ಲಾಳ ಉಪನಗರ ಸಮೀಪದ ವಿಶ್ವೇಶ್ವರಯ್ಯ ಬಡಾವಣೆಯ 4 ನೇ ಬ್ಲಾಕ್ ನಲ್ಲಿರುವ ಕಲಾಗುಡಿಯಲ್ಲಿ ಡಾ.ರಾಧಾಕೃಷ್ಣ ಉರಾಳರ ನಿರ್ದೇಕಶಕತ್ವದ ಕಲಾಕದಂಬ ಆರ್ಟ್ ಸೆಂಟರ್ ನ ಕಲಾವಿದರಿಂದ
‘ಭಾಮ ಕಲಾಪ’ ಎಂಬ ಯಕ್ಷಗಾನ ಪ್ರದರ್ಶನ ಹಮ್ಮಿ ಕೊಂಡಿದ್ದು ಈ ಒಂದು ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಾಯೋಜಿಸುತ್ತಿದೆ.
ಬೆಂಗಳೂರಿನ ರಾಮಸಂದ್ರ ಶಾಖೆಯ ಕರ್ನಾಟಕ ಬ್ಯಾಂಕ್ ನ ಮ್ಯಾನೇಜರ್ ಶ್ರೀ ರಾಘವೇಂದ್ರ ಕಾಮತ್,ಸಮಾಜ ಸೇವಕರಾದ ಶ್ರೀ ಪದ್ಮನಾಭ ಭರಣಿ ಹಾಗೂ ಮಾಜಿ ನಗರಪಾಲಿಕೆ ಸದಸ್ಯರು ಸಮಾಜ ಸೇವಕರು ಆದ ಶ್ರೀ ಮಂಜುನಾಥ ಸಿ.ಎಮ್ ಹಾಗೂ ಕರಬ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀ ದೇವರಾಜ ಕರಬರವರು ಮುಖ್ಯ ಅತಿಥಿಗಳಾಗಿ ಈ ಒಂದು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 9886066732, 9448510582 ಸಂಪರ್ಕಿಸ ಬಹುದು.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

