ತಮಿಳುನಾಡಿನ
ಮೈಲಾಡುತುರೈನಲ್ಲಿ 15 ಮಂದಿ ಮನೆಗೆ ನುಗ್ಗಿ ಮಹಿಳೆಯನ್ನು ಅಪಹರಿಸಿದ್ದಾರೆ. 15 ಮಂದಿ ಮನೆಯ ಕಬ್ಬಿಣದ ಗೇಟಿನ ಬೀಗ ಒಡೆದು ಮನೆಗೆ ನುಗ್ಗಿರುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಕೆಲವು ಸೆಕೆಂಡುಗಳ ನಂತರ, ಕೆಲವು ಪುರುಷರು ಮಹಿಳೆಯನ್ನು ಮನೆಯಿಂದ ಹೊರಗೆ ಎಳೆದುಕೊಂಡು ಹೋದರು.
ತಮಿಳುನಾಡಿನ ಮೈಲಾಡುತುರೈ ಎಂಬಲ್ಲಿ ಮಂಗಳವಾರ ರಾತ್ರಿ ಸುಮಾರು 15 ಜನರು ಮನೆಗೆ ನುಗ್ಗಿ ಮಹಿಳೆಯನ್ನು ಅಪಹರಿಸಿದ್ದಾರೆ. ಇಡೀ ಘಟನೆ ಮನೆಯ ಪ್ರವೇಶ ದ್ವಾರದ ಬಳಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆದರೆ, ಘಟನೆ ನಡೆದ ಅದೇ ರಾತ್ರಿ ಮಹಿಳೆಯನ್ನು ಪೊಲೀಸರು ರಕ್ಷಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಮೂವರು ಯುವಕರನ್ನು ಬಂಧಿಸಲಾಗಿದೆ.
15 ಮಂದಿ ಮನೆಯ ಕಬ್ಬಿಣದ ಗೇಟ್ನ ಬೀಗ ಒಡೆದು ಮನೆಗೆ ನುಗ್ಗಿರುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಕೆಲವು ಸೆಕೆಂಡುಗಳ ನಂತರ, ಕೆಲವು ಪುರುಷರು ಮಹಿಳೆಯನ್ನು ಮನೆಯಿಂದ ಹೊರಗೆ ಎಳೆದೊಯ್ದರು, ಮಕ್ಕಳು ಸೇರಿದಂತೆ ಕುಟುಂಬದ ಇತರ ಸದಸ್ಯರು ಯುವಕರನ್ನು ಬೇಡಿಕೊಳ್ಳುವುದು ಮತ್ತು ಸಹಾಯಕ್ಕಾಗಿ ಕಿರುಚುವುದನ್ನು ಕಾಣಬಹುದು.
ನಂತರ, ಕುಟುಂಬದವರು ಸ್ಥಳೀಯ ಪೊಲೀಸರನ್ನು ಸಂಪರ್ಕಿಸಿದರು, ಅವರು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು ಮತ್ತು ಅದೇ ರಾತ್ರಿ ಮಹಿಳೆಯನ್ನು ರಕ್ಷಿಸಿದರು. ನಂತರ ಮಹಿಳೆಯನ್ನು ಆಕೆಯ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಆರೋಪಿಗಳ ಪೈಕಿ ವಿಘ್ನೇಶ್ವರನ್ (34) ಎಂಬಾತ ಮಹಿಳೆಯೊಂದಿಗೆ ಸ್ನೇಹ ಬೆಳೆಸಿ ಆಕೆಯನ್ನು ಹಿಂಬಾಲಿಸಲು ಆರಂಭಿಸಿದ್ದ ಎಂಬುದು ಪ್ರಾಥಮಿಕ ವಿಚಾರಣೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಿಳೆ ಮೈಲಾಡುತುರೈ ಪೊಲೀಸರನ್ನು ಸಂಪರ್ಕಿಸಿ ವಿಷಯ ತಿಳಿಸಿದ್ದರು. ದೂರಿನ ಮೇರೆಗೆ ಮೈಲಾಡುತುರೈ ಪೊಲೀಸರು ವಿಘ್ನೇಶ್ವರನ್ಗೆ ಎಚ್ಚರಿಕೆ ನೀಡಿ ಲಿಖಿತ ಹೇಳಿಕೆ ಪಡೆದು ಬಿಡುಗಡೆಗೊಳಿಸಿದ್ದರು.
ವಿಘ್ನೇಶ್ವರನ್ ಈ ಹಿಂದೆ ಜುಲೈ 12 ರಂದು ಮಹಿಳೆಯನ್ನು ಅಪಹರಿಸಲು ಯತ್ನಿಸಿದ್ದರು. ಆದರೆ, ಆಕೆ ಓಡಿಹೋಗುವಲ್ಲಿ ಯಶಸ್ವಿಯಾಗಿದ್ದಳು ಮತ್ತು ಪೊಲೀಸರನ್ನು ಸಂಪರ್ಕಿಸಿದ್ದಳು. ಇದರಿಂದಾಗಿ ಪೊಲೀಸರಿಗೆ ಮೊನ್ನೆ ನಡೆದ ಕೃತ್ಯದಲ್ಲಿ ಈತನ ಕೈವಾಡವಿದೆ ಎಂದು ಮನದಟ್ಟಾಗಿತ್ತು.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

