ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡಬಲ್ ರೈಡಿಂಗ್ ನಿರ್ಬಂಧಿಸಿ ಹೇರಿದ್ದ ಆದೇಶವನ್ನು ವಾಪಾಸ್ ಪಡೆದುಕೊಳ್ಳಲಾಗಿದೆ.
ಮಧ್ಯಾಹ್ನವಷ್ಟೇ ಎಡಿಜಿಪಿ ಅಲೋಕ್ ಕುಮಾರ್ ಅಧಿಕಾರಿಗಳಿಗೆ ಈ ಬಗ್ಗೆ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿ ಮೌಖಿಕ ಆದೇಶ ನೀಡಿದ್ದರು.
ಆದರೆ ಎಲ್ಲಾ ವಲಯಗಳಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಆ ಆದೇಶವನ್ನು ವಾಪಸ್ ಪಡೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಇದರಿಂದ ಸಾರ್ವಜನಿಕರು ನಿರಾಳರಾಗಿ ನಿಟ್ಟುಸಿರು ಬಿಡುವಂತಾಗಿದೆ.