Wednesday, June 26, 2024
Homeಸುದ್ದಿಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಭಿನಂದನೆ 

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಭಿನಂದನೆ 

ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಇವರನ್ನು ಯಕ್ಷ ಭಾರತಿ ( ರಿ) ಕನ್ಯಾಡಿ ವತಿಯಿಂದ ಅಭಿನಂದಿಸಲಾಯಿತು.

ಯಕ್ಷ ಭಾರತಿ ಸಂಸ್ಥೆಯ ಎಂಟನೇ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆಯನ್ನು ಗೌರವ ಪೂರ್ವಕವಾಗಿ ಹೆಗ್ಗಡವರಿಗೆ ನೀಡಲಾಯಿತು.

ಯಕ್ಷ ಭಾರತಿ ಅಧ್ಯಕ್ಷರಾದ ರಾಘವೇಂದ್ರ ಬೈಪಡಿತ್ತಾಯ, ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ, ವಿಶ್ವಸ್ಥರಾದ ವಿದ್ಯಾಕುಮಾರ್ ಕಾಂಚೊಡು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಯಕ್ಷ ಭಾರತಿ ವಾರ್ಷಿಕೋತ್ಸವದ ಅಂಗವಾಗಿ  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆ ಸಹಯೋಗದಲ್ಲಿ ನಡೆಸಲಾಗುವ ಆರೋಗ್ಯ ತಪಾಸಣಾ ಶಿಬಿರ ,  ಮಂಗಳೂರಿನ ರೆಡ್ ಕ್ರಾಸ್ ಸಂಸ್ಥೆ ಸಹಕಾರದಲ್ಲಿ ರಕ್ತದಾನ ಶಿಬಿರ ,ಯಕ್ಷ ಭಾರತಿ ಪ್ರಶಸ್ತಿ ಪ್ರದಾನ, ವಿದ್ಯಾನಿಧಿ ವಿತರಣೆ, ಸೇವಾ ಗೌರವ ಸನ್ಮಾನ, ಯಕ್ಷಗಾನ ತಾಳಮದ್ದಳೆ, ಯಕ್ಷಗಾನ ಪ್ರದರ್ಶನ  ಬಗ್ಗೆ ತಿಳಿದು ಹೆಗ್ಗಡಯವರು ಸಂತಸ ವ್ಯಕ್ತಪಡಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments