ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಇವರನ್ನು ಯಕ್ಷ ಭಾರತಿ ( ರಿ) ಕನ್ಯಾಡಿ ವತಿಯಿಂದ ಅಭಿನಂದಿಸಲಾಯಿತು.
ಯಕ್ಷ ಭಾರತಿ ಸಂಸ್ಥೆಯ ಎಂಟನೇ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆಯನ್ನು ಗೌರವ ಪೂರ್ವಕವಾಗಿ ಹೆಗ್ಗಡವರಿಗೆ ನೀಡಲಾಯಿತು.
ಯಕ್ಷ ಭಾರತಿ ಅಧ್ಯಕ್ಷರಾದ ರಾಘವೇಂದ್ರ ಬೈಪಡಿತ್ತಾಯ, ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ, ವಿಶ್ವಸ್ಥರಾದ ವಿದ್ಯಾಕುಮಾರ್ ಕಾಂಚೊಡು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಯಕ್ಷ ಭಾರತಿ ವಾರ್ಷಿಕೋತ್ಸವದ ಅಂಗವಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆ ಸಹಯೋಗದಲ್ಲಿ ನಡೆಸಲಾಗುವ ಆರೋಗ್ಯ ತಪಾಸಣಾ ಶಿಬಿರ , ಮಂಗಳೂರಿನ ರೆಡ್ ಕ್ರಾಸ್ ಸಂಸ್ಥೆ ಸಹಕಾರದಲ್ಲಿ ರಕ್ತದಾನ ಶಿಬಿರ ,ಯಕ್ಷ ಭಾರತಿ ಪ್ರಶಸ್ತಿ ಪ್ರದಾನ, ವಿದ್ಯಾನಿಧಿ ವಿತರಣೆ, ಸೇವಾ ಗೌರವ ಸನ್ಮಾನ, ಯಕ್ಷಗಾನ ತಾಳಮದ್ದಳೆ, ಯಕ್ಷಗಾನ ಪ್ರದರ್ಶನ ಬಗ್ಗೆ ತಿಳಿದು ಹೆಗ್ಗಡಯವರು ಸಂತಸ ವ್ಯಕ್ತಪಡಿಸಿದರು.

- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

