ಬೆಂಗಳೂರಿನ ದಂತವೈದ್ಯೆಯೊಬ್ಬರು ಮಗುವಿಗೆ ನೇಣು ಹಾಕಿ ತಾನು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ದಂತ ವೈದ್ಯೆಯ ಹೆಸರು ಸೈಮಾ ನಾರಾಯಣ್.
ಆರಾಧನಾ ಹೆಸರಿನ ತನ್ನ 10 ವರ್ಷದ ಮಗಳಿಗೆ ಇನ್ನೊಂದು ಕೋಣೆಯಲ್ಲಿ ನೇಣು ಹಾಕಿ ಹತ್ಯೆ ಮಾಡಿದ ಬಳಿಕ ಸೈಮಾ ತಾನು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕೌಟುಂಬಿಕ ಕಲಹವೇ ಆತ್ಮಹತ್ಯೆಗೆ ಕಾರಣವಿರಬಹುದೆಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸೈಮಾ ಅವರ ಪತಿ ನಾರಾಯಣ್ ಅವರನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿರಾಜಪೇಟೆ ಮೂಲದ ದಂತವೈದ್ಯೆ ಪತ್ನಿ ಸೈಮಾ ಮುತ್ತಪ್ಪ, ಕೋಲಾರ ಮೂಲದ ದಂತವೈದ್ಯ ನಾರಾಯಣ್ ಕಳೆದ 10 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಇಬ್ಬರೂ ದಂತವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ನಾರಾಯಣ್ ಮತ್ತು ಸೈಮಾ ಗಂಡ ಹೆಂಡತಿ ಇಬ್ಬರು ಸೇರಿ ಆಸ್ಪತ್ರೆಯನ್ನು ನಡೆಸುತ್ತಿದ್ದರು.
ಪತಿ ನಾರಾಯಣ್ ಮನೆಯಲ್ಲಿಲ್ಲದ ವೇಳೆಯಲ್ಲಿ ವೇಳೆ ಸೈಮಾ ಮತ್ತು ಮಗಳು ಮನೆಯಲ್ಲಿನ ಪ್ರತ್ಯೇಕ ಕೋಣೆಗಳಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಬ್ಬರು ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್

