ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮದ ಬಂಟ್ರಂಜದಲ್ಲಿ 11 ವರ್ಷದ ಬಾಲಕಿಯೊಬ್ಬಳು ತಾನು ಆಡುತ್ತಿದ್ದ ಉಯ್ಯಾಲೆಗೆ ಸೀರೆಯು ಆಕಸ್ಮಾತಾಗಿ ಕುತ್ತಿಗೆಗೆ ಸುತ್ತಿಕೊಂಡು ಮೃತಪಟ್ಟಿದ್ದಾಳೆ.
ಮೃತ ಬಾಲಕಿ ಬಂಟ್ರಂಜ ನಿವಾಸಿ ಶೇಖರ್ ಎಂಬವರ ಪುತ್ರಿ ಲಿಖಿತಾ ಎಂದು ತಿಳಿದುಬಂದಿದೆ. ಆಕೆಯು ಬಾಬನಕಟ್ಟೆ ಶಾಲೆಯಲ್ಲಿ ಆರನೇ ತರಗತಿ ಕಲಿಯುತ್ತಿದ್ದ ಹುಡುಗಿ.
ಆಕೆಯ ಹಾಗೂ ಮನೆಯವರ ಪಾಲಿಗೆ ಕೆಟ್ಟ ದಿನವಾಗಿದ್ದ ನಿನ್ನೆ ಲಿಖಿತಾ ಮನೆಯಲ್ಲಿಯೇ ಇದ್ದಳು. ಆಕೆಯ ತಂದೆ ಶೇಖರ್ ತನ್ನ ಪತ್ನಿ ಚಂದ್ರಾವತಿಯೊಂದಿಗೆ ಮನೆಯಿಂದ ಹೊರಗೆ ಹೋಗಿದ್ದಾಗ ಅವಳು ಉಯ್ಯಾಲೆಯಲ್ಲಿ ಆಡುತ್ತಿದ್ದಳು.
ಆಕೆಯ ತಾಯಿ ಚಂದ್ರಾವತಿ ಹಿಂತಿರುಗಿ ಬಂದಾಗ ಮಗಳು ಸೀರೆಯಲ್ಲಿ ನೇಣು ಬಿಗಿದುಕೊಂಡಿರುವುದನ್ನು ಕಂಡು ಜೋರಾಗಿ ಕಿರುಚಿದಳು. ಆಕೆಯ ಕೂಗಿನಿಂದ ಗಾಬರಿಗೊಂಡ ನೆರೆಹೊರೆಯವರು ಸ್ಥಳಕ್ಕೆ ಧಾವಿಸಿ ಬಾಲಕಿಯ ಕುತ್ತಿಗೆಗೆ ಸಿಕ್ಕಿಕೊಂಡಿದ್ದ ಸೀರೆಯನ್ನು ಬಿಡಿಸಿದರು.
ಆದರೆ, ಲಿಖಿತಾ ಅದಾಗಲೇ ಮೃತಪಟ್ಟಿದ್ದಳು. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ