ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ ಮತ್ತು ವಾಣಿ ಆಂಗ್ಲ ಮಾಧ್ಯಮ ಶಾಲೆ ಹಳೆಕೋಟೆ ಇದರ ಆಶ್ರಯದಲ್ಲಿ ಆಗಸ್ಟ್ 06ರಂದು ನಡೆದ ಪುತ್ತೂರು ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
17ರ ವಯೋಮಾನದ ಬಾಲಕರ ವಿಭಾಗದಲ್ಲಿ ವಿಶಾಲ್ ಪಿ(ಶ್ರೀ ವಿಠಲ.ಪಿ ಮತ್ತು ರೇಷ್ಮಾಇವರ ಪುತ್ರ) [30-35 kg] (9ನೇ ತರಗತಿ) ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನ, ಲಿಖಿತ್ ಪಿ(ಶ್ರೀ ಚೆನ್ನಪ್ಪಗೌಡ ಮತ್ತು ಯಶಕಲಾ ಇವರ ಪುತ್ರ) [50-55 kg] (10ನೇ ತರಗತಿ) ದ್ವಿತೀಯ ಸ್ಥಾನ,
ಅದೈತ್ ಶರ್ಮ(ಶ್ರೀ ಸುಧೀರ್.ಬಿ.ಎಸ್ ಮತ್ತು ಲತಾ ಸುಧೀರ್ ಇವರ ಪುತ್ರ) [45-50 kg] (ಹತ್ತನೇತರಗತಿ) ತೃತೀಯ ಸ್ಥಾನ, ಬಾಲಕಿಯರ ವಿಭಾಗದಲ್ಲಿ ತೃಪ್ತಿ ಎ.ಕೆ (ಶ್ರೀ ಆನಂದಗೌಡ.ಕೆ ಮತ್ತು ಪಿ.ದಾಜಮ್ಮಇವರ ಪುತ್ರಿ) [44-48 kg] (10 ನೇ ತರಗತಿ) ತೃತೀಯ ಸ್ಥಾನ ಗಳಿಸಿರುತ್ತಾರೆ.
ಇದರಲ್ಲಿ ಪ್ರಥಮ ಸ್ಥಾನ ಪಡೆದ 9ನೇ ತರಗತಿ ವಿಶಾಲ್ ಪಿ ಇವರು ಕಟೀಲಿನಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸತೀಶ್ಕುಮಾರ್ ರೈ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

