Saturday, October 5, 2024
Homeಯಕ್ಷಗಾನ13.08.2022ರ ಶನಿವಾರ ಮತ್ತು 14.08.2022ರ ಆದಿತ್ಯವಾರ ಕಲಾ, ಸಾಂಸ್ಕೃತಿಕ, ಸಾಹಿತ್ಯ ವೈಭವ - 'ಪಾರ್ಥ ಸಾರಥ್ಯ' ಮತ್ತು 'ಶ್ರೀರಾಮ...

13.08.2022ರ ಶನಿವಾರ ಮತ್ತು 14.08.2022ರ ಆದಿತ್ಯವಾರ ಕಲಾ, ಸಾಂಸ್ಕೃತಿಕ, ಸಾಹಿತ್ಯ ವೈಭವ – ‘ಪಾರ್ಥ ಸಾರಥ್ಯ’ ಮತ್ತು ‘ಶ್ರೀರಾಮ ದರ್ಶನ’ ತಾಳಮದ್ದಳೆ

ಸಿರಿಬಾಗಿಲು- ಗಡಿನಾಡು ಕಾಸರಗೋಡಿನ ಪ್ರಸಿದ್ಧ ಸಂಸ್ಥೆಯಾದ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ಮುಂದಿನ ಸಾರ್ವಜನಿಕ ಲೋಕಾರ್ಪಣೆಯ ವರೇಗೆ ತಿಂಗಳ ಎರಡನೇ ಶನಿವಾರ ಮತ್ತು ಭಾನುವಾರ ಕಲಾ- ಸಾಂಸ್ಕೃತಿಕ- ಸಾಹಿತ್ಯ ವೈಭವ ಕಾರ್ಯಕ್ರಮಗಳನ್ನು  ಆಯೋಜನೆ ಮಾಡಲಾಗಿದೆ.

ಆಜಾದಿ ಕಾ ಅಮೃತ್ ಮಹೋತ್ಸವ್ (ಸ್ವಾತಂತ್ರ್ಯದ ಅಮೃತ ಮಹೋತ್ಸವ) ಕಾರ್ಯಕ್ರಮದ ಅಂಗವಾಗಿ  ದಿನಾಂಕ 13.08.2022ರ  ಶನಿವಾರ  ಮತ್ತು 14.08.2022ರ ಆದಿತ್ಯವಾರ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ಕಲಾ, ಸಾಂಸ್ಕೃತಿಕ, ಸಾಹಿತ್ಯ ವೈಭವದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. 

   13.08.2022 ರಂದು ಅಪರಾಹ್ನ 3 ಘಂಟೆಗೆ ‘ಪಾರ್ಥ ಸಾರಥ್ಯ’ ಎಂಬ ಯಕ್ಷಗಾನ ತಾಳಮದ್ದಳೆ ನಡೆಯಲಿದೆ.  14.08.2022ರ ಆದಿತ್ಯವಾರ ಬೆಳಗ್ಗೆ 10 ಘಂಟೆಯಿಂದ ಕವಿಗೋಷ್ಠಿ  ಮತ್ತು ಅಪರಾಹ್ನ 3 ಘಂಟೆಗೆ ‘ಶ್ರೀರಾಮ ದರ್ಶನ’ ತಾಳಮದ್ದಳೆ ನೆರವೇರಲಿದೆ.

ಎಲ್ಲಾ ಕಾರ್ಯಕ್ರಮಗಳು SV VISION LIVE ಯೂಟ್ಯೂಬ್ ಚಾನೆಲ್ ನಲ್ಲಿ ನೇರ ಪ್ರಸಾರ ಆಗಲಿದೆ. ವಿವರಗಳಿಗೆ ಕರಪತ್ರದ ಚಿತ್ರವನ್ನು ನೋಡಿ     

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments