ಭಾರತೀಯ ಸಂಸ್ಕೃತಿಯು ಅತ್ಯಂತ ಪ್ರಾಚೀನ ವಾಗಿದ್ದು ಶ್ರೀರಾಮ, ಶ್ರೀ ಕೃಷ್ಣರಂತಹ ವ್ಯಕ್ತಿತ್ವಗಳ ಆದರ್ಶದ ಪರಂಪರೆಯು ನಮಗೆ ದಾರಿದೀಪವಾಗಿದೆ. ಅದೇ ರೀತಿ ಮುಂದಿನ ಪೀಳಿಗೆಗಾಗಿ ಉತ್ತಮ ಆದರ್ಶಗಳನ್ನು ಆಚರಿಸಿ ತೋರಿಸುವ ಬದ್ಧತೆ ನಮಗಿದೆಯೆಂದು ಕಟೀಲು ಕ್ಷೇತ್ರದ ಅನುವಂಶಿಕ ಅರ್ಚಕರಾದ
ಶ್ರೀ ಕಮಲಾದೇವಿ ಪ್ರಸಾದ ಆಸ್ರಣ್ಣ ತಿಳಿಸಿದರು.
ಕಟೀಲು ಸೌಂದರ್ಯ ಪ್ಯಾಲೇಸಿನಲ್ಲಿ ದಿನಾಂಕ 13. 8.2022 ರಂದು ಜರಗಿದ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಕೇಂದ್ರ ಸಮಿತಿಯ ಸಭೆ ಮತ್ತು ಶ್ರೀ ದುರ್ಗಾ ನಮಸ್ಕಾರ ಪೂಜೆಯಲ್ಲಿ ಭಾಗವಹಿಸಿ ಮಾತನಾಡಿದರು.
ಪ್ರತಿಷ್ಠಾನದ ಅಧ್ಯಕ್ಷ ಕೈಯೂರು ನಾರಾಯಣ ಭಟ್ ಸತ್ಸಂಗವನ್ನು ನಡೆಸಿಕೊಟ್ಟರು. ಗೌರವಾಧ್ಯಕ್ಷ ಎ. ವಿ. ನಾರಾಯಣ ಪ್ರತಿಷ್ಠಾನದ ಕಾರ್ಯ ವಿಸ್ತರಣೆಯ ಮಾಹಿತಿ ನೀಡಿದರು.
ಬಂಟ್ವಾಳ ಘಟಕದ ಅಧ್ಯಕ್ಷ ಸೀತಾರಾಮ ಶೆಟ್ಟಿ, ಮಂಗಳೂರು ದಕ್ಷಿಣ ಘಟಕದ ಅಧ್ಯಕ್ಷ ಭರತ್ ಮೂಡಬಿದ್ರೆ ಘಟಕದ ಕಾರ್ಯದರ್ಶಿ ಸದಾನಂದ ನಾರಾವಿ ,ಪುತ್ತೂರು ಘಟಕದ ಚಂದ್ರಶೇಖರ್ ಆಳ್ವ ಪಡುಮಲೆ ಪ್ರಗತಿಯ ವಿವರ ನೀಡಿದರು.
ರಾಮಕೃಷ್ಣ ನಾಯಕ್ ಕೋಕಳ ಆಸ್ರಣ್ರರನ್ನು ಫಲ ಕಾಣಿಕೆ ಸಮರ್ಪಿಸಿ ಪ್ರತಿಷ್ಠಾನದ ವತಿಯಿಂದ ಗೌರವಿಸಿದರು.
ಸದಸ್ಯರಾದ ಪ್ರೊ .ಶ್ರೀರಾಮ ಕಾರಂತ್ ಮಂಗಳೂರು, ಸುಮಿತ್ರ ಕಾರಂತ್, ಬಾಲಕೃಷ್ಣ ಶೆಟ್ಟಿ, ಗಣೇಶ್ ಆಚಾರ್ಯ ಜೆಪ್ಪು ,ಭವಾನಿ ಶಂಕರ್ ಪುತ್ತೂರು, ಉದಯ ಶಂಕರ ರೈ ಪುಣಚ, ಸೀತಾರಾಮ ಶೆಟ್ಟಿ. ಕೆ ಉಜಿರೆ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ಪ್ರತಿಷ್ಠಾನದ ಉಪಾಧ್ಯಕ್ಷ ಜಯರಾಮ ಭಂಡಾರಿ.ಎಂ ಧರ್ಮಸ್ಥಳ ಸ್ವಾಗತಿಸಿ ಮಹಿಳಾ ವಿಭಾಗದ ಜಿಲ್ಲಾ ಸಂಚಾಲಕಿ ಪ್ರೊ. ವತ್ಸಲಾರಾಜ್ಞಿ ವಂದಿಸಿದರು. ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ಕಾರ್ಯಕ್ರಮ ನಿರೂಪಿಸಿದರು.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

