ಶಿವಮೊಗ್ಗದಲ್ಲಿ ದೇಶವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವವರಿಗೆ ಕೆ.ಎಸ್ ಈಶ್ವರಪ್ಪ ಎಚ್ಚರಿಕೆ ನೀಡಿದ್ದಾರೆ.
ಕಳೆದೆರೆಡು ದಿನಗಳಲ್ಲಿ ಶಿವಮೊಗ್ಗದಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳ ಬಗ್ಗೆ ಅವರು ತಮ್ಮದೇ ಶೈಲಿಯ ಖಡಕ್ ಮಾತುಗಳಲ್ಲಿ ಎಚ್ಚರಿಸಿದ್ದಾರೆ.
“ಇಂತಹ ದೇಶವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ತಮ್ಮ ಸಮುದಾಯದ ಯುವಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಸ್ಲಿಂ ಸಮುದಾಯದ ಹಿರಿಯ ಸದಸ್ಯರಲ್ಲಿ ನಾನು ವಿನಂತಿಸುತ್ತೇನೆ”,
“ಹಿಂದೂ ಸಮಾಜ ಉದಯಿಸಿದರೆ ಇಂತಹ ಚಟುವಟಿಕೆಗಳಿಗೆ ಉಳಿಗಾಲವಿಲ್ಲ. ಅಶಾಂತಿ ಸೃಷ್ಟಿಸುವವರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳುತ್ತಾರೆ” ಎಂದು ಚೂರಿ ಇರಿತ ಘಟನೆ ಕುರಿತು ಶಿವಮೊಗ್ಗ ಬಿಜೆಪಿ ಶಾಸಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.