ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂಬಿಎ ವಿಭಾಗದ ವಿದ್ಯಾರ್ಥಿಗಳು ತಯಾರಿಸಿದ “ಕೋವಿಡ್-19ರ ಕಾರಣದಿಂದ ಕಾರ್ಯ ಚಟುವಟಿಕೆಗಳ ಮಾದರಿಯಲ್ಲಿ ಬದಲಾವಣೆ-ದಕ್ಷಿಣ ಕನ್ನಡದಲ್ಲಿ ಒಂದು ಪ್ರಾಯೋಗಿಕ ಅಧ್ಯಯನ” ಎನ್ನುವ ಯೋಜನಾ ಪ್ರಬಂಧಕ್ಕೆ ವರ್ಷದ ಅತ್ಯುತ್ತಮ ಪ್ರಾಜೆಕ್ಟ್ ಪ್ರಶಸ್ತಿ ದೊರೆತಿದೆ.
ಆಗಸ್ಟ್ 12 ಮತ್ತು 13 ರಂದು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಆವರಣದಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಬೆಂಗಳೂರು ಹಾಗೂ ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಹಯೋಗದೊಂದಿಗೆ ನಡೆದ 45ನೇ ಸರಣಿಯ ಕೆಎಸ್ಸಿಎಸ್ಟಿ ಸ್ಟೂಡೆಂಟ್ ಪ್ರಾಜೆಕ್ಟ್ ಪ್ರೊಗ್ರಾಂನ ಸ್ನಾತಕೋತ್ತರ ಎಂಬಿಎ ವಿಭಾಗದಲ್ಲಿ ವಿದ್ಯಾರ್ಥಿಗಳು ವರ್ಷದ ಅತ್ಯುತ್ತಮ ಪ್ರಾಜೆಕ್ಟ್ ಪ್ರಶಸ್ತಿಯೊಂದಿಗೆ ನಗದು ಪುರಸ್ಕಾರವನ್ನು ಪಡೆದುಕೊಂಡಿದ್ದಾರೆೆ.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಕರಿಸಿದ್ದಪ್ಪ ಅವರಿಂದ ಪ್ರಶಸ್ತಿಯನ್ನು ಸ್ವೀಕರಿಸಿದರು.
ಸಹಾಯಕ ಪ್ರಾಧ್ಯಾಪಕರಾದ ಪ್ರೊ.ಜೀವಿತಾ.ಬಿ.ವಿ ಹಾಗೂ ಪ್ರೊ.ರೇಶ್ಮಾ ಪೈ.ಎ ಇವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಾದ ಅಂಕಿತ, ಶ್ವೇತಾ.ಕೆ, ಮಂಜುನಾಥ್.ಎಚ್.ಎಮ್ ಮತ್ತು ಕೃತನ್.ಬಿ.ಕೆ ಈ ಅಧ್ಯಯನವನ್ನು ಮಾಡಿ ಯೋಜನಾ ವರದಿಯನ್ನು ಮಂಡಿಸಿದ್ದರು ಎಂದು ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ತಿಳಿಸಿದ್ದಾರೆ

- 6th Standard, Social Science – HISTORY – Chapter 1 – INTRODUCTION TO HISTORY AND PRE-HISTORIC SOCIETY
- 9th English, UNIT 9 PROSE – AN ASTROLOGER’S DAY
- 9th Standard English POEM 10 – PHOTOGRAPH
- 10th Standard English, NON-DETAIL – Ulysses and the Cyclops
- 10th Standard, Social – Geography CHAPTER 28 – INDIA – MAJOR INDUSTRIES