Saturday, October 5, 2024
Homeಯಕ್ಷಗಾನದುಬಾಯಿ ಯಕ್ಷಗಾನ ಅಭ್ಯಾಸ ತರಗತಿಯಿಂದ ಸಿರಿಬಾಗಿಲು ಪ್ರತಿಷ್ಠಾನಕ್ಕೆ 75,000 ರೂಪಾಯಿಗಳ ದೇಣಿಗೆ

ದುಬಾಯಿ ಯಕ್ಷಗಾನ ಅಭ್ಯಾಸ ತರಗತಿಯಿಂದ ಸಿರಿಬಾಗಿಲು ಪ್ರತಿಷ್ಠಾನಕ್ಕೆ 75,000 ರೂಪಾಯಿಗಳ ದೇಣಿಗೆ

ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನಕ್ಕೆ “”ದುಬಾಯಿ ಯಕ್ಷಗಾನ ಅಭ್ಯಾಸ ತರಗತಿಯವರು ತಮ್ಮ ಪ್ರಾಯೋಜಿತ “ಯಕ್ಷ ಶ್ರೀರಕ್ಷಾ ಗೌರವ” ಯೋಜನೆ ಯಡಿ 75,000/- ರೂಪಾಯಿಗಳ ಬೃಹತ್ ಮೊತ್ತದ ದೇಣಿಗೆಯನ್ನು ನೀಡಿದ್ದಾರೆ.

ದುಬಾಯಿ ಯಕ್ಷಗಾನ ಅಭ್ಯಾಸ ತರಗತಿಯ ಸದಸ್ಯರಾದ ಶ್ರೀ ವಾಸು ಬಾಯಾರ್ ರವರು ಈ ಮೊತ್ತವನ್ನು ಪ್ರತಿಷ್ಠಾನಕ್ಕೆ ಹಸ್ತಾಂತರಿಸಿದರು.

“ಯಕ್ಷಗಾನ ಅಭ್ಯಾಸ ತರಗತಿ ದುಬಾಯಿಯ ಅಧ್ಯಕ್ಷರು ಶ್ರೀ ದಿನೇಶ್ ಶೆಟ್ಟಿ ಕೊಟ್ಟಿಂಜ ರವರಿಗೆ ಹಾಗು ಸರ್ವ ಸದಸ್ಯರಿಗೆ ಪ್ರತಿಷ್ಠಾನದ ವತಿಯಿಂದ ಅನಂತ ಧನ್ಯವಾದಗಳು. ತಮ್ಮೆಲ್ಲರ ಸಹಕಾರದಿಂದ ಗಡಿನಾಡು ಕಾಸರಗೋಡಿನ ಚರಿತ್ರೆ ಯಲ್ಲಿ ಈ ಯೋಜನೆ ಅಚ್ಚಳಿಯದೆ ಉಳಿಯುವಂತಾಗಲಿ” ಎಂದು  ಸಿರಿಬಾಗಿಲು ಪ್ರತಿಷ್ಠಾನದ ಅಧ್ಯಕ್ಷರು ಮತ್ತು ಸದಸ್ಯರು ತಮ್ಮ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ. 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments