ಭೀಕರ ಅಪಘಾತ – ಧರ್ಮಸ್ಥಳ-ಸುಬ್ರಹ್ಮಣ್ಯ ಹೆದ್ದಾರಿಯ ನೆಟ್ಟಣದಲ್ಲಿ ಎರ್ಟಿಗಾ- ಓಮ್ನಿ ಢಿಕ್ಕಿ, ಏಳು ಮಂದಿಗೆ ಗಾಯ
ಭೀಕರ ಅಫಘಾತವೊಂದರಲ್ಲಿ ಎರ್ಟಿಗಾ ಕಾರು ಮತ್ತು ಮಾರುತಿ ಓಮ್ನಿ ನಡುವೆ ಢಿಕ್ಕಿ ಸಂಭವಿಸಿ ಏಳು ಜನ ಗಾಯಗೊಂಡ ಘಟನೆ ನಿನ್ನೆ ಶನಿವಾರ ನಡೆದಿದೆ.
ಧರ್ಮಸ್ಥಳ-ಸುಬ್ರಹ್ಮಣ್ಯ ಹೆದ್ದಾರಿಯ ನೆಟ್ಟಣದಲ್ಲಿ ಎಂಬಲ್ಲಿ ಈ ಘಟನೆ ನಡೆದಿದ್ದು ಕಾರುಗಳೆರಡೂ ನುಜ್ಜುಗುಜ್ಜಾಗಿದ್ದು ಎರಡೂ ಕಾರುಗಳಲ್ಲಿ ಪ್ರಯಾಣಿಸುತ್ತಿದ್ದವರು ಗಾಯಗೊಂಡಿದ್ದಾರೆ.
ಬೆಂಗಳೂರು ಮೂಲದ ಕುಟುಂಬವೊಂದು ಧರ್ಮಸ್ಥಳ ಕ್ಷೇತ್ರ ಸಂದರ್ಶನ ಮುಗಿಸಿ ಸುಬ್ರಹ್ಮಣ್ಯ ಕ್ಷೇತ್ರದತ್ತ ಪ್ರಯಾಣಿಸುತ್ತಿತ್ತು. ಓಮ್ನಿ ಕಾರಿನಲ್ಲಿದ್ದ ಶಿವಮೊಗ್ಗ, ಶಿಕಾರಿಪುರದ ಪ್ರಯಾಣಿಕರು ಧರ್ಮಸ್ಥಳದತ್ತ ಬರುತ್ತಿದ್ದರು ಎಂದು ತಿಳಿದುಬಂದಿದೆ.
ನೆಟ್ಟಣ ಸಮೀಪದ ಅಮಲ ಫಾರ್ಮ್ ಸಮೀಪ ಎರಡೂ ಕಾರುಗಳು ಮುಖಾಮುಖಿಯಾಗಿ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದು ಕೂಡಲೇ ಕಡಬ ಪ್ರಾಥಮಿಕ ಅರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು.
ನಂತರ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಪುತ್ತೂರಿನ ಆಸ್ಪತ್ರೆಗೆ ಸಾಗಿಸಲಾಯಿತು. ಸ್ಥಳಕ್ಕೆ ಕಡಬ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

