ಸಾರ್ವಜನಿಕ ಗಣೇಶೋತ್ಸವ ಸಮಿತಿ (ರಿ)ದೇವಿ ನಗರ ಪದವಿನಂಗಡಿ, ಇವರಿಗೆ ಈ ಬಾರಿ 25ನೇ ವರುಷದ ಸಾರ್ವಜನಿಕ ಗಣೇಶೋತ್ಸವದ ಬೆಳ್ಳಿ ಹಬ್ಬ (ರಜತ ಮಹೋತ್ಸವ)ದ ಸಂಭ್ರಮ.
ಸಾರ್ವಜನಿಕ ಗಣೇಶೋತ್ಸವ ಸಮಿತಿ(ರಿ)ದೇವಿ ನಗರ ಇವರಿಂದ, ಸಾರ್ವಜನಿಕ ಶ್ರೀ ಗಣೇಶೋತ್ಸವ (ರಜತ ಮಹೋತ್ಸವ) ದ ಅಂಗವಾಗಿ ವಿವಿಧ ಧಾರ್ಮಿಕ,ಸಾಂಸ್ಕೃತಿಕ ಕಾರ್ಯಕ್ರಮಗಳು ದಿನಾಂಕ 31.08.2022ರಿಂದ 02.09.2022ರ ವರೆಗೆ ವೈಭವದಲ್ಲಿ ನಡೆಯಲಿದೆ.
ರಜತ ಮಹೋತ್ಸವ ಸಂಭ್ರಮದ ಶ್ರೀ ಮಹಾಗಣಪತಿ ದೇವರ ಪ್ರತಿಷ್ಠೆ 24 ತೆಂಗಿನಕಾಯಿ ಮಹಾಗಣಪತಿ ಯಾಗ, ಶ್ರೀ ಲಕ್ಷ್ಮೀ ಮಹಾಗಣಪತಿ ಯಾಗ, ಶ್ರೀ ವಿದ್ಯಾಗಣಪತಿ ಮಹಾಯಾಗ, ಪೂರ್ಣಾಹುತಿ, ಮಹಾ ರಂಗಪೂಜೆ, ಮೂಡಪ್ಪ ಸೇವೆ, ಅಷ್ಟಾವಧಾನ ಸೇವೆ, ಮಹಾಪೂಜೆ, ಮಹಾಅನ್ನಸಂತರ್ಪಣೆ, ಮಹಾಗಣಪತಿ ವಿಸರ್ಜನೆ, ವಿವಿಧ ಧಾರ್ಮಿಕ ಸಾಂಸ್ಕೃತಿಕ ವಿಧಿ ವಿಧಾನಗಳನ್ನೊಳಗೊಂಡ ಕಾರ್ಯಕ್ರಮಗಳು ಈ ಮೂರುದಿನಗಳಲ್ಲಿ ನಡೆಯಲಿವೆ.
ದಿನಾಂಕ 01.09.2022 ನೇ ಗುರುವಾರ ರಾತ್ರಿ ಘಂಟೆ 9.30ರಿಂದ ಸಾಲಿಗ್ರಾಮ ಮೇಳದವರಿಂದ ‘ಚಂದ್ರಮುಖಿ ಸೂರ್ಯಸಖಿ’ ಯಕ್ಷಗಾನ ಪ್ರದರ್ಶನ ನಡೆಯಲಿದೆ.
ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳು ಮತ್ತು ಸರ್ವಸದಸ್ಯರು ಸರ್ವರಿಗೂ ಸವಿನಯ ಆಮಂತ್ರಣವನ್ನು ಕೋರಿದ್ದಾರೆ.

- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

