ತುಳು ಬಾಷೆಗೆ ಮಾನ್ಯತೆ ಸಿಗಬೇಕು ಮತ್ತು ತುಳು ಭಾಷೆಯನ್ನು 8 ನೇ ಪರಿಚ್ಚೇದಕ್ಕೆ ಸೇರಿಸಬೇಕು ಎಂಬ ತುಳುವರ ಬೇಡಿಕೆಯನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ಪೋಸ್ಟ್ ಕಾರ್ಡ್ ಮೂಲಕ ತಿಳಿಸುವ ವಿಭಿನ್ನ ಯೋಜನೆಯನ್ನು ತುಳುವೆರೆ ಕುಡ್ಲ (ರಿ) ತುಳು ಸಂಘಟನೆ ,ತುಳುನಾಡು ವಾರ್ತೆ ವಾರ ಪತ್ರಿಕೆ ಮತ್ತು ನಮ್ಮ ಟಿ.ವಿ ಸಹಯೋಗದಲ್ಲಿ ದಿ. 01.09.2022ನೇ ಗುರುವಾರ ತುಳುನಾಡಿನ ತುತ್ತ ತುದಿಯಾದ ಬೆಳ್ತಂಗಡಿ ತಾಲೂಕಿನ “ಬಂಜಾರು ಮಲೆ” ಎಂಬ ಪ್ರದೇಶದಲ್ಲಿ ಪ್ರಾರಂಭಿಸಲು ಉದ್ದೇಶಿಸಲಾಗಿದೆ.
ಈ ಅಭಿಯಾನವು 1 ಲಕ್ಷಕ್ಕೂ ಅಧಿಕ ಪೋಸ್ಟ್ ಕಾರ್ಡ್ ತುಳುನಾಡಿನ ಜನತೆಯಿಂದ ಬರೆಯಿಸಿ ಕಳುಹಿಸುವ ಗುರಿಯನ್ನು ಹೊಂದಿದ್ದು. ಈಗಾಗಲೇ ಅಭಯಾನಕ್ಕೆ ಹಲವು ಸಂಘಟನೆಗಳ ಬೆಂಬಲ ದೊರೆತಿದೆ.
ಅಭಿಯಾನದ ಆಯೋಜಕರುಗಳು ತುಳುನಾಡಿನ ಎಲ್ಲಾ ರಾಜಕೀಯ, ಧಾರ್ಮಿಕ ಮತ್ತು ಎಲ್ಲಾ ಸಂಘಟನೆಗಳಿಗೆ ಈ ಅಭಿಯಾನದಲ್ಲಿ ನಮ್ಮೊಂದಿಗೆ ಕೈ ಜೋಡಿಸುವಂತೆ ವಿನಂತಿ ಮಾಡಿದೆ. ಹೆಚ್ಚಿನ ಮಾಹಿತಿಗಾಗಿ 9845858594 ಮೊಬೈಲ್ ನಂಬರನ್ನು ಸಂಪರ್ಕಿಸಿ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
