ತುಳು ಬಾಷೆಗೆ ಮಾನ್ಯತೆ ಸಿಗಬೇಕು ಮತ್ತು ತುಳು ಭಾಷೆಯನ್ನು 8 ನೇ ಪರಿಚ್ಚೇದಕ್ಕೆ ಸೇರಿಸಬೇಕು ಎಂಬ ತುಳುವರ ಬೇಡಿಕೆಯನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ಪೋಸ್ಟ್ ಕಾರ್ಡ್ ಮೂಲಕ ತಿಳಿಸುವ ವಿಭಿನ್ನ ಯೋಜನೆಯನ್ನು ತುಳುವೆರೆ ಕುಡ್ಲ (ರಿ) ತುಳು ಸಂಘಟನೆ ,ತುಳುನಾಡು ವಾರ್ತೆ ವಾರ ಪತ್ರಿಕೆ ಮತ್ತು ನಮ್ಮ ಟಿ.ವಿ ಸಹಯೋಗದಲ್ಲಿ ದಿ. 01.09.2022ನೇ ಗುರುವಾರ ತುಳುನಾಡಿನ ತುತ್ತ ತುದಿಯಾದ ಬೆಳ್ತಂಗಡಿ ತಾಲೂಕಿನ “ಬಂಜಾರು ಮಲೆ” ಎಂಬ ಪ್ರದೇಶದಲ್ಲಿ ಪ್ರಾರಂಭಿಸಲು ಉದ್ದೇಶಿಸಲಾಗಿದೆ.
ಈ ಅಭಿಯಾನವು 1 ಲಕ್ಷಕ್ಕೂ ಅಧಿಕ ಪೋಸ್ಟ್ ಕಾರ್ಡ್ ತುಳುನಾಡಿನ ಜನತೆಯಿಂದ ಬರೆಯಿಸಿ ಕಳುಹಿಸುವ ಗುರಿಯನ್ನು ಹೊಂದಿದ್ದು. ಈಗಾಗಲೇ ಅಭಯಾನಕ್ಕೆ ಹಲವು ಸಂಘಟನೆಗಳ ಬೆಂಬಲ ದೊರೆತಿದೆ.
ಅಭಿಯಾನದ ಆಯೋಜಕರುಗಳು ತುಳುನಾಡಿನ ಎಲ್ಲಾ ರಾಜಕೀಯ, ಧಾರ್ಮಿಕ ಮತ್ತು ಎಲ್ಲಾ ಸಂಘಟನೆಗಳಿಗೆ ಈ ಅಭಿಯಾನದಲ್ಲಿ ನಮ್ಮೊಂದಿಗೆ ಕೈ ಜೋಡಿಸುವಂತೆ ವಿನಂತಿ ಮಾಡಿದೆ. ಹೆಚ್ಚಿನ ಮಾಹಿತಿಗಾಗಿ 9845858594 ಮೊಬೈಲ್ ನಂಬರನ್ನು ಸಂಪರ್ಕಿಸಿ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
