ಯಕ್ಷಗಾನದ ಅದ್ವಿತೀಯ ಹಿಮ್ಮೇಳ ಕಲಾವಿದರಾದ ಕೀರ್ತಿಶೇಷ ಶ್ರೀ ಕಡಬ ನಾರಾಯಣ ಆಚಾರ್ಯ ಮತ್ತು ಅವರ ಪುತ್ರ ಕೀರ್ತಿಶೇಷ ಶ್ರೀ ವಿನಯ ಆಚಾರ್ಯ ಕಡಬ ಇವರ ಸ್ಮರಣಾರ್ಥ ಪ್ರತಿವರ್ಷ ನೀಡಲಾಗುತ್ತಿರುವ ಕಡಬದ್ವಯ ಸಂಸ್ಮರಣ ಯಕ್ಷಗಾನ ಪ್ರಶಸ್ತಿ 2022 ಕಾರ್ಯಕ್ರಮ ದಿನಾಂಕ 09.10.2022ನೇ ಆದಿತ್ಯವಾರ ನಡೆಯಲಿದೆ.
ಅಪರಾಹ್ನ 1.45 ಘಂಟೆಗೆ ಆರಂಭವಾಗಲಿರುವ ಕಾರ್ಯಕ್ರಮ ಶ್ರೀ ರಾಧಾಕೃಷ್ಣ ಭಜನಾ ಯುವಕ ಸಂಘ, ಕಿನ್ನಿಕಂಬಳ, ಗುರುಪುರ ಕೈಕಂಬ ಇಲ್ಲಿ ನಡೆಯಲಿದೆ.
ಈ ಬಾರಿಯ ಕಡಬದ್ವಯ ಸಂಸ್ಮರಣ ಯಕ್ಷಗಾನ ಪ್ರಶಸ್ತಿಯನ್ನು ಖ್ಯಾತ ಯಕ್ಷಗಾನ ಮದ್ದಳೆಗಾರ ಶ್ರೀ ಸುಬ್ರಹ್ಮಣ್ಯ ಶಾಸ್ತ್ರಿ ಮಣಿಮುಂಡ ಅವರಿಗೆ ನೀಡಲಾಗುತ್ತದೆ.

ಸಂಸ್ಮರಣಾ ಕಾರ್ಯಕ್ರಮದ ನಂತರ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ “ಧರ್ಮೋ ರಕ್ಷತಿ ರಕ್ಷಿತಃ” ಎಂಬ ಯಕ್ಷಗಾನ ತಾಳಮದ್ದಳೆ ನಡೆಯಲಿದೆ. ಕಾರ್ಯಕ್ರಮದ ವಿವರಗಳಿಗೆ ಕರಪತ್ರದ ಚಿತ್ರಗಳನ್ನು ನೋಡಿ


- 7th Standard, English – Unit 1 Prose – A Tiger in the House
- 7th Standard, Social – HISTORY CHAPTER 1 – MAJOR DEVELOPMENTS IN THE WORLD
- 6th Standard, Social Science – HISTORY – Chapter 1 – INTRODUCTION TO HISTORY AND PRE-HISTORIC SOCIETY
- 9th English, UNIT 9 PROSE – AN ASTROLOGER’S DAY
- 9th Standard English POEM 10 – PHOTOGRAPH