ಹೌದು. ಈ ಸುದ್ದಿ ನಿಜ. ಯಕ್ಷಗಾನ ತಾಳಮದ್ದಳೆ ಕ್ಷೇತ್ರದ ಸುಪ್ರಸಿದ್ಧ, ಗಣ್ಯ ಕಲಾವಿದರೆಲ್ಲಾ ಕಟೀಲು ಕ್ಷೇತ್ರದತ್ತ ಪಯಣಿಸಲಿದ್ದಾರೆ. ಯಾಕೆ ಎಂದು ಆಶ್ಚರ್ಯಪಡಬೇಡಿ.
ಪ್ರತಿವರ್ಷದಂತೆ ಈ ವರ್ಷವೂ ಕಟೀಲು ಸರಸ್ವತೀ ಸದನದಲ್ಲಿ ಅಮೋಘ ತಾಳಮದ್ದಳೆ ಸಪ್ತಾಹ ನಡೆಯಲಿದೆ. ಸೆಪ್ಟೆಂಬರ್ 5ರಿಂದ 11ರ ವರೆಗೆ ನಡೆಯುವ ಹದಿನೆಂಟನೇ ವರ್ಷದ ಈ ಸಪ್ತಾಹದಲ್ಲಿ “ಗೃಹಣೀ ಗೃಹಮುಚ್ಯತೇ” ಎಂಬ ಆಖ್ಯಾನಕ್ಕೆ ಸಂಬಂಧಪಟ್ಟ ಪ್ರಸಂಗಗಳ ತಾಳಮದ್ದಳೆ ನಡೆಯಲಿದೆ.
ತಾಳಮದ್ದಳೆ ಪ್ರತಿದಿನ ಸಂಜೆ 4 ಘಂಟೆಗೆ ಆರಂಭವಾಗಲಿದೆ. ಸೆಪ್ಟೆಂಬರ್ 5ರಿಂದ ಮೊದಲ್ಗೊಂಡು 11ರ ವರೆಗೆ “ಗಿರಿಜೆ, ಕಯಾದು, ಸುಕನ್ಯೆ, ಸಾವಿತ್ರೀ, ಚಂದ್ರಮತೀ, ಸೀತೆ, ರುಕ್ಮಿಣೀ, ತಾರೆಯರು” ಎಂಬ ಪ್ರಸಂಗಗಳ ತಾಳಮದ್ದಳೆ ನಡೆಯಲಿದೆ.
ಕೊನೆಯ ದಿನ ಪೂರ್ವಾಹ್ನ ಮತ್ತು ಅಪರಾಹ್ನ ಸೇರಿದಂತೆ ಎರಡು ತಾಳಮದ್ದಳೆ ಪ್ರದರ್ಶನ ನಡೆಯಲಿದೆ. ಕಾರ್ಯಕ್ರಮದ ವಿವರಗಳಿಗೆ ಚಿತ್ರ ನೋಡಿ.

- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

