ಈಶ್ವರಮಂಗಲದಲ್ಲಿ ಸರಕಾರೀ ಬಸ್ ಹತ್ತುತ್ತಿದ್ದ ಕುಡುಕನನ್ನು ಬಸ್ ನಿರ್ವಾಹಕ ಕಾಲಿನಿಂದ ಒದ್ದು ಬಸ್ಸಿನಿಂದ ಕೆಳಗೆ ಬೀಳಿಸಿದ ಘಟನೆ ನಡೆದಿದೆ. ಬಸ್ ನಿರ್ವಾಹಕನನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
KA 21 F0002 ಸಂಖ್ಯೆಯ ಬಸ್ಸಿನಲ್ಲಿ ಈ ಘಟನೆ ನಡೆದಿದೆ. ಕುಡುಕನನ್ನು ಬಸ್ಸಿನಿಂದ ಕೆಳಕ್ಕೆ ಇಳಿಸಲು ನಿರ್ವಾಹಕನಿಗೆ ಕಾರಣಗಳಿರಬಹುದು. ಆದರೆ ಆತ ಇಳಿಸಿದ ವಿಧಾನ ಅಮಾನವೀಯವಾಗಿದೆ.
ಕಾಲಿನಿಂದ ಎದೆಗೆ ಒದ್ದ ದೃಶ್ಯವನ್ನು ನೋಡಿದರೆ ಕುಡುಕ ಪ್ರಯಾಣಿಕ ಬದುಕುಳಿದದ್ದೇ ಆಶ್ಚರ್ಯ. ಇತರ ಪ್ರಯಾಣಿಕನಿಗೆ ತೊಂದರೆ ಮಾಡುತ್ತಿದ್ದಾನೆ ಎಂದೋ ಅಥವಾ ಆತನಲ್ಲಿ ಟಿಕೇಟಿನ ಹಣವಿರಲಿಲ್ಲ ಎಂಬಿತ್ಯಾದಿ ಕಾರಣಗಳಿಂದ ಬಸ್ಸಿನಿಂದ ಇಳಿಸಿದ್ದರೂ ಇಲ್ಲಿ ನಿರ್ವಾಹಕನ ವರ್ತನೆ ಆಕ್ಷೇಪಾರ್ಹವಾಗಿದೆ.
ಮಾತ್ರವಲ್ಲದೆ ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತದೆ. ಈ ಪ್ರಕರಣವನ್ನು ಕೆಎಸ್ಸಾರ್ಟಿಸಿ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿದ್ದಾರೆ ಎನ್ನಲಾಗಿದೆ.
ಮಾತ್ರವಲ್ಲದೆ ಈಗಾಗಲೇ ಬಸ್ ನಿರ್ವಾಹಕನನ್ನು ಕೆಎಸ್ಸಾರ್ಟಿಸಿ ಪುತ್ತೂರು ವಿಭಾಗೀಯ ನಿಯಂತ್ರಣಾಧಿಕಾರಿ ಅಮಾನತು ಮಾಡಲಾಗಿದೆ. ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿದ್ದಾರೆ. ಮುಂದಿನ ತನಿಖೆ ನಡೆಯುತ್ತಿದೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

