ಮಂಗಳೂರು ಮಹಾನಗರ ಪಾಲಿಕೆಯ 23ನೇ ಮೇಯರ್ ಆಗಿ ಬಿಜೆಪಿಯ ಜಯಾನಂದ ಅಂಚನ್ ಮತ್ತು ಉಪಮೇಯರ್ ಆಗಿ ಬಿಜೆಪಿಯ ಪೂರ್ಣಿಮಾ ಆಯ್ಕೆಯಾಗಿದ್ದಾರೆ.
23ನೇ ಅವಧಿಗೆ ಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ ಹಾಗೂ ಉಪಮೇಯರ್ ಸ್ಥಾನ ಹಿಂದುಳಿದ ವರ್ಗ ಎ ಮಹಿಳೆಗೆ ಮೀಸಲಾಗಿತ್ತು. ಮಂಗಳೂರು ಮಹಾನಗರ ಪಾಲಿಕೆಯ 23ನೇ ಅವಧಿಗೆ ಮೇಯರ್ ಆಗಿ ಹಿರಿಯ ಕೌನ್ಸಿಲರ್ ಜಯಾನಂದ ಅಂಚನ್ ಮತ್ತು ಉಪಮೇಯರ್ ಆಗಿ ಪೂರ್ಣಿಮಾ ಶುಕ್ರವಾರ ಆಯ್ಕೆಯಾದರು.
14 ಮತಗಳನ್ನು ಪಡೆದ ಕಾಂಗ್ರೆಸ್ನ ಶಶಿಧರ ಹೆಗಡೆ ವಿರುದ್ಧ ಜಯಾನಂದ ಅಂಚನ್ 46 ಮತಗಳನ್ನು ಪಡೆದು ವಿಜಯಶಾಲಿಯಾದರು. ಪೂರ್ಣಿಮಾ 46 ಮತಗಳನ್ನು ಪಡೆದರೆ, 14 ಮತಗಳನ್ನು ಕಾಂಗ್ರೆಸ್ನ ಜೀನತ್ ಶಂಶುದ್ದೀನ್ ಪಡೆದರು.
ನಾಲ್ಕು ಸ್ಥಾಯಿ ಸಮಿತಿಗಳಿಗೆ ತಲಾ ಏಳು ಸದಸ್ಯರು ಅವಿರೋಧವಾಗಿ ಆಯ್ಕೆಯಾದರು.
60 ಕೌನ್ಸಿಲರ್ಗಳಲ್ಲದೆ, ಮಂಗಳೂರು ನಗರದ ಇಬ್ಬರು ಶಾಸಕರಾದ ಡಿ.ವೇದವ್ಯಾಸ್ ಕಾಮತ್ ಮತ್ತು ವೈ.ಭರತ್ ಶೆಟ್ಟಿ ಮತ ಚಲಾಯಿಸಿದರು. ಪ್ರಾದೇಶಿಕ ಆಯುಕ್ತ ಜೆ.ಸಿ.ಪ್ರಕಾಶ್ ಚುನಾವಣೆ ನಿರ್ವಹಿಸಿದರು.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

