ಪುತ್ತೂರು, ಸೆ 9: ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಕುಂಬ್ರ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ವಾಲಿಬಾಲ್ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದಿದೆ.
ಈ ಪಂದ್ಯಾಟದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಪೂಜಾಶ್ರೀ ಎ ಅತ್ಯುತ್ತಮ ಆಲ್ರೌಂಡರ್ ಪ್ರಶಸ್ತಿಯನ್ನು ಪಡೆದುಕೊಂಡರು.
ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಪವಿತ್ರ ಭಟ್ ಕೆ, ನತಾಶಾ ಎನ್ ಭಂಡಾರಿ, ಪೂಜಾಶ್ರೀ ಎ, ವಾಣಿಜ್ಯ ವಿಭಾಗದ ಶ್ರಾವ್ಯ, ಹಿತಶ್ರೀ ಎ, ತನುಷಾ ಸಿ ಕೆ, ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಹಿತಶ್ರೀ ಎಚ್ ಎಚ್ , ಶ್ರೀಲಕ್ಷ್ಮಿ ಉಮಾಪತಿ, ವಾಣಿಜ್ಯ ವಿಭಾಗದ ಪ್ರಿಯಾಂಕ ಎಸ್ ಭಾಗವಹಿಸಿದ್ದರು.
ಈ ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ.
ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.
- ಇಮ್ರಾನ್ ಖಾನ್ ಜೀವಂತವಾಗಿದ್ದಾರೆಯೇ? ಜೈಲಿನಲ್ಲಿಯೇ ಸಾವಿನ ಸಂದೇಹ
- ನೆಟ್ಫ್ಲಿಕ್ಸ್ನ ‘ಲವ್ ಈಸ್ ಬ್ಲೈಂಡ್’ (Love Is Blind) ಈಗ ಬಹು ಜನಪ್ರಿಯ
- 3.7 ಮಿಲಿಯನ್ ಪೌಂಡ್ (47 ಕೋಟಿ ರೂಪಾಯಿ) ಮೌಲ್ಯದ ಫೆರಾರಿ ಕಾರು ಪೊಲೀಸ್ ಕಾರ್ಯಾಚರಣೆಯಲ್ಲಿ ವಶಕ್ಕೆ
- ಉಜಿರೆಯಲ್ಲಿ ಕೆಎಸ್ಆರ್ ಟಿಸಿ ಬಸ್ ಮತ್ತು ಬೈಕ್ ಢಿಕ್ಕಿ – ಯುವಕ ಸಾವು: UJIRE
- ಒಂದೇ ದೋಣಿಯಲ್ಲಿ ಕುಳಿತು ಇಂಗ್ಲಿಷ್ ಕಾಲುವೆಯನ್ನು ದಾಟಿದ 230 ಜನರು!

