ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಪುತ್ತೂರು ಮತ್ತು ಮೊರಾಜಿ ದೇಸಾಯಿ ಶಾಲೆ, ಬಲ್ನಾಡು ಇದರ ಆಶ್ರಯದಲ್ಲಿ ಸೆಪ್ಟೆಂಬರ್ 9ರಂದು ನಡೆದ ಪುತ್ತೂರು ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.
ತಂಡದಲ್ಲಿ ಮೋಕ್ಷಿತ್(ನೇರಳಕಟ್ಟೆ ನಿವಾಸಿ ಶ್ರೀ ಜಗದೀಶ್ ಮತ್ತು ಪ್ರೇಮ ಇವರ ಪುತ್ರ), ಪ್ರೀತಮ್(ಮಿತ್ತೂರು ನಿವಾಸಿ ಜಯಂತ ಗೌಡ ಮತ್ತು ಲೀಲಾವತಿ ಇವರ ಪುತ್ರ), ರಿತೇಶ್(ಕಬಕ ನಿವಾಸಿ ಶ್ರೀ ವೆಂಕಪ್ಪ ಮತ್ತು ವೀಣ ಇವರ ಪುತ್ರ), ತ್ರಿಜಲ್(ಕೈಕಾರ ನಿವಾಸಿ ಶ್ರೀ ವಿನೋದ್ ಮತ್ತು ಶರಿಕ ಇವರ ಪುತ್ರ), ಎಂ.ಪ್ರಣಾಮ್ (ಮಿನಾವು ನಿವಾಸಿ ಶ್ರೀ ಕೇಶವ ಮತ್ತು ಶುಭಶ್ರೀ ಇವರ ಪುತ್ರ),
ಧನ್ವಿತ್.ಎಂ(ಬಲ್ನಾಡು ನಿವಾಸಿ ಶ್ರೀ ಕೆ.ಮಾಧವ ಗೌಡ ಮತ್ತು ಯಶೋಧ ಇವರ ಪುತ್ರ), ವೈಶಾಖ್(ಬುಳ್ಳೇರಿಕಟ್ಟೆ ನಿವಾಸಿ ಶ್ರೀ ಗಣೇಶ್ ಎಮ್ ಮತ್ತು ಸರಸ್ವತಿ.ಪಿ ಇವರ ಪುತ್ರ), ಚಿನ್ಮಯ್(ಒಳತ್ತಡ್ಕ ನಿವಾಸಿ ಶ್ರೀ ಸೇಸಪ್ಪ ಮತ್ತು ಚಂದ್ರಿಕಾ ಇವರ ಪುತ್ರ), ನಮನ್(ಶ್ರೀ ದಯಾನಂದ ಗೌಡ ಮತ್ತು ವಿಮಲಾ ಇವರ ಪುತ್ರ), ತನುಷ್(ಶ್ರೀ ಪಾಂಡುರ0ಗ.ಕೆ ಮತ್ತು ಕುಸುಮ.ಕೆ ಇವರ ಪುತ್ರ) ತೃತೇಶ್(ಶ್ರೀ ಅಶೋಕ್.ಬಿ.ಬಿ ಮತ್ತು ಪೂರ್ಣಿಮಾ ಇವರ ಪುತ್ರ) ಮತ್ತು ನಿವೇದ್ (ಶ್ರೀ ರಾಜೇಶ್ ಮತ್ತು ಅಶ್ವಿನಿ ಇವರ ಪುತ್ರ) ಇದ್ದು,
ರಿತೇಶ್ ಪಂದ್ಯಾಟದ ಉತ್ತಮ ದಾಳಿಗಾರ ಪ್ರಶಸ್ತಿಯನ್ನು ಪಡೆದುಕೊಂಡಿದ್ದು, ತಂಡವು ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ, ಕುದ್ಮಾರು ಇಲ್ಲಿ ನಡೆಯುವ ತಾಲೂಕು ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತದೆ ಎಂದು ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

