ತೆಲಂಗಾಣದ ಸಿಕಂದರಾಬಾದ್ನ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂ ಗೆ ಬೆಂಕಿ ಹತ್ತಿಕೊಂಡಿದ್ದು ಈ ಅಗ್ನಿ ಅವಘಡದಲ್ಲಿ ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.
ನೆಲಮಹಡಿಯಲ್ಲಿರುವ ಎಲೆಕ್ಟ್ರಿಕ್ ಸ್ಕೂಟರ್ ರೀಚಾರ್ಜಿಂಗ್ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಹೊಗೆ 1 ಮತ್ತು 2ನೇ ಮಹಡಿಯಲ್ಲಿದ್ದ ಜನರನ್ನು ಆವರಿಸಿದೆ. ಮೇಲಿನ ಮಹಡಿಗಳಲ್ಲಿದ್ದ ಹೋಟೆಲ್ನಲ್ಲಿ ಬೆಂಕಿ ವ್ಯಾಪಿಸಿಕೊಂಡು ಎಂಟು ಮಂದಿ ಸಾವನ್ನಪ್ಪಿದ್ದಾರೆ.
ಉಳಿದ ಜನರು ಕಟ್ಟಡದಿಂದ ಜಿಗಿದಿದ್ದು, ಸ್ಥಳೀಯರು ರಕ್ಷಿಸಿದ್ದಾರೆ. ಹೆಚ್ಚಿನವರು ಹೊಗೆಯಿಂದ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಕಟ್ಟಡದ ಮೇಲಿನ ಮಹಡಿಯಿಂದ ಹಲವರು ಜಿಗಿಯುವ ವೀಡಿಯೋ ದೃಶ್ಯ ವೈರಲ್ ಆಗಿದೆ.
ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು, ಸ್ಥಳದಲ್ಲೇ ಅಗ್ನಿಶಾಮಕ ದಳ ಬೀಡು ಬಿಟ್ಟಿದ್ದು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ


