ನಟ ನರೇಶ್ ಮತ್ತು ಪವಿತ್ರಾ ಲೋಕೇಶ್ ಅವರ ಲವ್ವಿ ಡವ್ವಿ ಅಫೇರ್ ಕೆಲವು ತಿಂಗಳುಗಳಿಂದ ಸ್ಯಾಂಡಲ್ವುಡ್ ಮತ್ತು ಟಾಲಿವುಡ್ನಲ್ಲಿ ಸಂಚಲನವನ್ನು ಸೃಷ್ಟಿಸುತ್ತಿದೆ. ಭಾರೀ ಪ್ರಚಾರದ ನಂತರ ಇದೀಗ ಮತ್ತೊಮ್ಮೆ ನರೇಶ್ ವಿಷ್ಯಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ.
ಟಾಲಿವುಡ್ ನಟ ನರೇಶ್ ಮನೆಗೆ ರಮ್ಯಾ ರಘುಪತಿ ರೀ ಎಂಟ್ರಿ ಕೊಟ್ಟಿದ್ದಾರೆ ಎಂಬ ಗಾಳಿಸುದ್ದಿಗಳು ಹರಿದಾಡುತ್ತಿದ್ದುವು. ನಟ ನರೇಶ್ ಮತ್ತು ಪವಿತ್ರಾ ಲೋಕೇಶ್ ಚಿತ್ರರಂಗದ ಒಳಗೂ ಹೊರಗೂ ಜೊತೆಯಾಗಿ ಕೆಲಸ ಮಾಡುತ್ತಿದ್ದು ನವಿರಾದ ಆತ್ಮೀಯ ಸಂಬಂಧವನ್ನು ಹೊಂದಿದ್ದಾರೆ.
ನರೇಶ್ ಮತ್ತು ಅವರ ಪತ್ನಿ ರಮ್ಯಾ ರಘುಪತಿ ಅವರ ಸಂಬಂಧದಲ್ಲಿ ಸಾಕಷ್ಟು ಬಿರುಕುಗಳ ನಂತರ ಕಾನೂನು ಹೋರಾಟವನ್ನು ಪ್ರಾರಂಭಿಸಿ ಕೋರ್ಟಿನಲ್ಲಿ ಡೈವೋರ್ವ್ ಕೇಸ್ ನಡೆಯುತ್ತಿದೆ. ಇವೆಲ್ಲದರ ನಡುವೆ ಮತ್ತೆ ನರೇಶ್ ಮನೆಗೆ ರಮ್ಯಾ ರಘುಪತಿ ಬಂದಿದ್ದಾರೆ ಎಂಬ ಸುದ್ದಿಯೊಂದು ಪ್ರಚಾರದಲ್ಲಿತ್ತು.
ಹಾಗಾದರೆ ಇದಕ್ಕೆ ಪವಿತ್ರಾ ಲೋಕೇಶ್ ಅವರ ಪ್ರತಿಕ್ರಿಯೆ ಮತ್ತು ಮುಂದಿನ ಕ್ರಮ ಏನು ಎಂಬ ಚರ್ಚೆಯೂ ಮಾಧ್ಯಮ ಮೂಲಕ ನಡೆಯುತ್ತಿತ್ತು. ನರೇಶ್ ಮತ್ತು ಪವಿತ್ರಾ ಮೈಸೂರಿನ ಹೋಟೆಲ್ ಒಂದರಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಈ ವಿಚಾರ ಬಿಸಿ ಬಿಸಿ ಚರ್ಚೆಗೆ ಗ್ರಾಸವಾಗಿತ್ತು. ಆ ನಂತರ ಮೂವರೂ ಮೌನವಾಗಿದ್ದರು.
ಇದೀಗ ರಮ್ಯಾ ರಘುಪತಿ ಮತ್ತೆ ನರೇಶ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ ಎಂಬ ಸುದ್ದಿಯ ನಂತರ ಪವಿತ್ರಾ ಲೋಕೇಶ್ ಮುಂದೇನು ಮಾಡುತ್ತಾರೆ ಎಂಬ ಕುತೂಹಲ ಎಲ್ಲರಲ್ಲೂ ಮೂಡಿತ್ತು. ಆದರೆ ಇದೆಲ್ಲಾ ಸುದ್ದಿಗೂ ಈಗ ಸ್ವತಃ ನರೇಶ್ ಅವರೇ ಈಗ ಸ್ಪಷ್ಟೀಕರಣ ನೀಡಿದ್ದಾರೆ.
“ನಾನು ರಮ್ಯಾ ಜೊತೆಯಾಗಿ ವಾಸಿಸುತ್ತಿಲ್ಲ, ರಮ್ಯಾ ನನ್ನ ಮನೆಗೆ ಬಂದಿಲ್ಲ, ಅದು ಸಾಧ್ಯವೂ ಇಲ್ಲ” ಎಂದು ತೆಲುಗು ನಟ ನರೇಶ್ ಸ್ಪಷ್ಟನೆ ನೀಡಿದ್ದಾರೆ.
“ರಮ್ಯಾ ಮತ್ತು ನಾನು ಎಂದಿಗೂ ಮತ್ತೆ ಒಂದಾಗಲು ಸಾಧ್ಯವೇ ಇಲ್ಲ. ಡಿವೋರ್ಸ್ ಕೇಸ್ ಕೋರ್ಟಿನಲ್ಲಿದೆ. ಕೋರ್ಟ್ ತೀರ್ಪಿಗಾಗಿ ನಾನು ಕಾಯುತ್ತಿದ್ದೇನೆ. ಯಾರೂ ವಂದತಿಗಳಿಗೆ ಕಿವಿಗೊಡಬಾರದು” ಎಂಬುದಾಗಿ ನರೇಶ್ ಹೇಳಿದ್ದಾರೆ ಎಂದು ವರದಿಯಾಗಿದೆ.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ