ನಿನ್ನೆಯ ಪೂಂಚ್ ಜಿಲ್ಲೆಯ ಅಫಘಾತದ ಕರಾಳ ನೆನಪು ಮಾಸುವ ಮುನ್ನವೇ ಇಂದು ಮುಂಜಾನೆ ಜಮ್ಮು ಕಾಶ್ಮೀರದಲ್ಲಿ ಮತ್ತೊಂದು ಅಫಘಾತ ಸಂಭವಿಸಿದೆ.
ಇಂದು ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಭಿಂಬರ್ ಗಲಿ ಬಳಿ ಹಲವಾರು ಪ್ರಯಾಣಿಕರಿದ್ದ ಬಸ್ ಆಳವಾದ ಕಂದಕಕ್ಕೆ ಬಿದ್ದು ನಾಲ್ವರು ಸಾವನ್ನಪ್ಪಿದ್ದಾರೆ. ಈ ಅಫಘಾತದಲ್ಲಿ ಹಲವಾರು ಮಂದಿ ಗಾಯಗೊಂಡಿದ್ದಾರೆ.
ಈ ವಿಚಾರವನ್ನು ಮಂಜಕೋಟೆ ತಹಸೀಲ್ದಾರ್ ಜಾವೇದ್ ಚೌಧರಿಯವರು ಖಚಿತಪಡಿಸಿದ್ದಾರೆ. ರಾಜೌರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಿಂದ ಪ್ರಾಣಹಾನಿಯಿಂದ ತಲ್ಲಣಗೊಂಡಿದೆ.
ಈ ದುಃಖದ ಸಮಯದಲ್ಲಿ, ನಾವೆಲ್ಲರೂ ದುಃಖಿತ ಕುಟುಂಬಗಳೊಂದಿಗೆ ಇದ್ದೇವೆ. . ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಜಿಲ್ಲಾಡಳಿತ ಸಾಧ್ಯವಿರುವ ಎಲ್ಲ ನೆರವು ನೀಡುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಪರಿಹಾರ ಕಾರ್ಯ ಭರದಿಂದ ನಡೆಯುತ್ತಿದೆ.
- ನಾಳೆ ದಿನಾಂಕ 06.07.2024 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಖಾಸಗಿ ಮತ್ತು ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ
- ಖ್ಯಾತ ಯಕ್ಷಗಾನ ವೇಷಧಾರಿ ಕುಂಬಳೆ ಶ್ರೀಧರ ರಾವ್ ಇನ್ನಿಲ್ಲ – ಕುಂಬಳೆ ಶ್ರೀಧರ ರಾಯರ ಕಲಾಜೀವನದ ಮೇಲೊಂದು ಇಣುಕು ನೋಟ
- ಖ್ಯಾತ ಯಕ್ಷಗಾನ ಪ್ರಸಾದನ ತಜ್ಞ, ವೇಷಭೂಷಣಗಳ ನಿರ್ಮಾಪಕ ನಿಧನ
- ಉಚಿತ ಆಯುರ್ವೇದ ವೈದ್ಯಕೀಯ ಶಿಬಿರ
- ಶ್ರೀಮತಿ ಪರಿಣಯ, ಇಂದ್ರಕೀಲಕ, ಉತ್ತರ ಗೋಗ್ರಹಣ, ಶರಸೇತು ಬಂಧನ – ಕಟೀಲಿನಲ್ಲಿ ನಾಲ್ಕು ದಿನಗಳಲ್ಲಿ ನಾಲ್ಕು ಯಕ್ಷಗಾನ ಪ್ರದರ್ಶನಗಳು
![](https://yakshadeepa.com/wp-content/uploads/2022/09/IMG-20220912-WA0016.jpg)