ಕಾಸರಗೋಡು : ಭಾರತೀಯ ರಿಸರ್ವ್ ಬ್ಯಾಂಕಿನ ರಾಷ್ಟ್ರ ಮಟ್ಟದ ಎಫ್.ಐ.ಡಿ.ಡಿ.ಸಮ್ಮೇಳನ ಬೇಕಲದ ತಾಜ್ ರೆಸಾರ್ಟ್ ನಲ್ಲಿ ಸೆ.17 ರಂದು ಜರಗಿತು.
ಈ ಸಂದರ್ಭದಲ್ಲಿ ಮಂಗಳೂರಿನ ತೋನ್ಸೆ ಯಕ್ಷಬಳಗದಿಂದ ಇಂಗ್ಲಿಷ್ ಭಾಷೆಯಲ್ಲಿ ‘ಪಾಂಡವಾಶ್ವಮೇಧಂ’ ತೆಂಕುತಿಟ್ಟು ಯಕ್ಷಗಾನವನ್ನು ಪ್ರದರ್ಶಿಸಲಾಯಿತು. ಶ್ಯಾಡ್ಸ್ ಈವೆಂಟ್ಸ್ ಅವರ ಸಂಯೋಜನೆಯಲ್ಲಿ ಜಿಲ್ಲೆಯ ಪ್ರಸಿದ್ಧ ಕಲಾವಿದರು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಭಾಗವತರಾಗಿ ತೋನ್ಸೆ ಪುಷ್ಕಳ ಕುಮಾರ್, ಹಿಮ್ಮೇಳದಲ್ಲಿ ಶರತ್ ಕುಮಾರ್ ಕದ್ರಿ, ಸುದಾಸ್ ಕಾವೂರು ಮತ್ತು ಹರಿಶ್ಚಂದ್ರ ನಾಯಗ ಮಾಡೂರು ಸಹಕರಿಸಿದರು. ಪಾತ್ರಧಾರಿಗಳಾಗಿ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ, ರವಿ ಅಲೆವೂರಾಯ ವರ್ಕಾಡಿ, ಡಾ.ದಿನಕರ ಎಸ್.ಪಚ್ಚನಾಡಿ ಮತ್ತಿತರರು ಭಾಗವಹಿಸಿದ್ದರು.
ರಿಸರ್ವ್ ಬ್ಯಾಂಕಿನ ರಾಷ್ಟ್ರ ಮಟ್ಟದ ಹಿರಿಯ ಅಧಿಕಾರಿಗಳು ಮತ್ತು ವಿವಿಧ ಭಾಗಗಳ ಪ್ರತಿನಿಧಿಗಳು ಯಕ್ಷಗಾನವನ್ನು ವೀಕ್ಷಿಸಿ ಕಲಾವಿದರನ್ನು ಅಭಿನಂದಿಸಿದರು. ಇದೇ ಸಂದರ್ಭದಲ್ಲಿ ಕೇರಳದ ಕಲಾತಂಡದವರು ಕಥಕ್ಕಳಿ ನೃತ್ಯ ಪ್ರದರ್ಶನವನ್ನೂ ನೀಡಿದರು.


- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!


