ಕಾಸರಗೋಡು : ಭಾರತೀಯ ರಿಸರ್ವ್ ಬ್ಯಾಂಕಿನ ರಾಷ್ಟ್ರ ಮಟ್ಟದ ಎಫ್.ಐ.ಡಿ.ಡಿ.ಸಮ್ಮೇಳನ ಬೇಕಲದ ತಾಜ್ ರೆಸಾರ್ಟ್ ನಲ್ಲಿ ಸೆ.17 ರಂದು ಜರಗಿತು.
ಈ ಸಂದರ್ಭದಲ್ಲಿ ಮಂಗಳೂರಿನ ತೋನ್ಸೆ ಯಕ್ಷಬಳಗದಿಂದ ಇಂಗ್ಲಿಷ್ ಭಾಷೆಯಲ್ಲಿ ‘ಪಾಂಡವಾಶ್ವಮೇಧಂ’ ತೆಂಕುತಿಟ್ಟು ಯಕ್ಷಗಾನವನ್ನು ಪ್ರದರ್ಶಿಸಲಾಯಿತು. ಶ್ಯಾಡ್ಸ್ ಈವೆಂಟ್ಸ್ ಅವರ ಸಂಯೋಜನೆಯಲ್ಲಿ ಜಿಲ್ಲೆಯ ಪ್ರಸಿದ್ಧ ಕಲಾವಿದರು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಭಾಗವತರಾಗಿ ತೋನ್ಸೆ ಪುಷ್ಕಳ ಕುಮಾರ್, ಹಿಮ್ಮೇಳದಲ್ಲಿ ಶರತ್ ಕುಮಾರ್ ಕದ್ರಿ, ಸುದಾಸ್ ಕಾವೂರು ಮತ್ತು ಹರಿಶ್ಚಂದ್ರ ನಾಯಗ ಮಾಡೂರು ಸಹಕರಿಸಿದರು. ಪಾತ್ರಧಾರಿಗಳಾಗಿ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ, ರವಿ ಅಲೆವೂರಾಯ ವರ್ಕಾಡಿ, ಡಾ.ದಿನಕರ ಎಸ್.ಪಚ್ಚನಾಡಿ ಮತ್ತಿತರರು ಭಾಗವಹಿಸಿದ್ದರು.
ರಿಸರ್ವ್ ಬ್ಯಾಂಕಿನ ರಾಷ್ಟ್ರ ಮಟ್ಟದ ಹಿರಿಯ ಅಧಿಕಾರಿಗಳು ಮತ್ತು ವಿವಿಧ ಭಾಗಗಳ ಪ್ರತಿನಿಧಿಗಳು ಯಕ್ಷಗಾನವನ್ನು ವೀಕ್ಷಿಸಿ ಕಲಾವಿದರನ್ನು ಅಭಿನಂದಿಸಿದರು. ಇದೇ ಸಂದರ್ಭದಲ್ಲಿ ಕೇರಳದ ಕಲಾತಂಡದವರು ಕಥಕ್ಕಳಿ ನೃತ್ಯ ಪ್ರದರ್ಶನವನ್ನೂ ನೀಡಿದರು.


- 6th Standard, Science, Chapter 3, Separation of Substances
- 7th Standard, English, Second Language, Chapter 3 – EKALAVYA
- 8th Standard, Science, Chapter 3, Health: The Ultimate Treasure
- 8th Standard, English FL, PROSE – 3, BEFORE THE MATCH
- 6th Standard, Social Science, Chapter 5 – RISE OF NEW RELIGIONS


