ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಬಿಜೆಪಿಗೆ – ಪಂಜಾಬ್ ಲೋಕ ಕಾಂಗ್ರೆಸ್ ಬಿಜೆಪಿ ಪಕ್ಷದೊಂದಿಗೆ ವಿಲೀನ ಮಹತ್ವಪೂರ್ಣ ಬೆಳವಣಿಗೆಯೊಂದರಲ್ಲಿ
ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡರು.
ಅವರನ್ನು ವಿದ್ಯುಕ್ತವಾಗಿ ಬಿಜೆಪಿ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು.
ಅಮರಿಂದರ್ ಸಿಂಗ್ ಸ್ಥಾಪಿಸಿದ ಪಂಜಾಬ್ ಲೋಕ ಕಾಂಗ್ರೆಸ್ ಪಕ್ಷವನ್ನು ಭಾರತೀಯ ಜನತಾ ಪಕ್ಷದಲ್ಲಿ ವಿಲೀನಗೊಳಿಸಲಾಯಿತು.
ಪಂಜಾಬ್ ಗಡಿ ರಾಜ್ಯವಾಗಿದ್ದು, ಪಾಕಿಸ್ತಾನದೊಂದಿಗಿನ ನಮ್ಮ ಸಂಬಂಧಗಳು ಹದಗೆಡುತ್ತಿರುವುದನ್ನು ನಾನು ನೋಡಿದ್ದೇನೆ… ಪಂಜಾಬ್ನಲ್ಲಿ ಸಂಪೂರ್ಣ ಅವ್ಯವಸ್ಥೆಯನ್ನು ಸೃಷ್ಟಿಸಲು ಡ್ರೋನ್ಗಳು ಈಗ ನಮ್ಮ ಭೂಪ್ರದೇಶಕ್ಕೆ ಬರುತ್ತಿವೆ. ಚೀನಾ ಕೂಡ ನಮ್ಮಿಂದ ದೂರವಿಲ್ಲ. ನಮ್ಮ ರಾಜ್ಯ ಮತ್ತು ದೇಶವನ್ನು ರಕ್ಷಿಸುವುದು ನಮ್ಮ ಕರ್ತವ್ಯ ಎಂದು ದೆಹಲಿಯಲ್ಲಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಹೇಳಿದ್ದಾರೆ.