Saturday, October 5, 2024
Homeಸುದ್ದಿವಿದ್ಯೋದಯ ಪದವಿ ಪೂರ್ವ ಕಾಲೇಜು ಮಾದಕದ್ರವ್ಯ ವ್ಯಸನಮುಕ್ತ ಸಮಾಜ ನಿರ್ಮಾಣ–ಉಪನ್ಯಾಸ ಕಾರ್ಯಕ್ರಮ

ವಿದ್ಯೋದಯ ಪದವಿ ಪೂರ್ವ ಕಾಲೇಜು ಮಾದಕದ್ರವ್ಯ ವ್ಯಸನಮುಕ್ತ ಸಮಾಜ ನಿರ್ಮಾಣ–ಉಪನ್ಯಾಸ ಕಾರ್ಯಕ್ರಮ

ಉಡುಪಿ: ವಿದ್ಯೋದಯ ಟ್ರಸ್ಟ್ (ರಿ.)ನ ಅಂಗಸ0ಸ್ಥೆ ವಿದ್ಯೋದಯ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಮಾದಕದ್ರವ್ಯ ವ್ಯಸನಮುಕ್ತ ಸಮಾಜ ನಿರ್ಮಾಣ ಮಾಡುವ ಬಗ್ಗೆ ಉಪನ್ಯಾಸ ಕಾರ್ಯಕ್ರಮ ಜರುಗಿತು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ವಕೀಲರ ಸಂಘ ಉಡುಪಿ, ಪದವಿ ಪೂರ್ವ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲೆ ಮತ್ತು ವಿದ್ಯೋದಯ ಪದವಿ ಪೂರ್ವ ಕಾಲೇಜಿನ ಸಹಯೋಗದೊಂದಿಗೆ ಈ ಕಾರ್ಯಕ್ರಮವನ್ನು 29 ಸೆಪ್ಟೆಂಬರ್ 2022ರಂದು ಆಯೋಜಿಸಲಾಗಿತ್ತು.

ಶ್ರೀಮತಿ ಶರ್ಮಿಳಾ, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಇವರು ಕಾರ್ಯಕ್ರಮ ಉದ್ಘಾಟಿಸಿ, ಪ್ರಸ್ತಾವನೆಗೈದರು. ಡಾ| ಸುನಿಲ್, ವೈದ್ಯರು, ಎ.ವಿ. ಬಾಳಿಗ ಆಸ್ಪತ್ರ‍್ರೆ, ಉಡುಪಿ ಇವರು ಮಾದಕದ್ರವ್ಯ ವ್ಯಸನ ಮತ್ತು ದುಷ್ಪರಿಣಾಮಗಳ ಬಗ್ಗೆ ಮಾತನಾಡಿ ವಿದ್ಯಾರ್ಥಿಗಳು ಇದರ ವಿಷ ವರ್ತುಲದೊಳಗೆ ಸಿಗದಂತೆ ಜಾಗರೂಕರಾಗಬೇಕೆಂದು ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಸಂದೀಪ್‌ಕುಮಾರ್ ಸ್ವಾಗತಿಸಿ ಧನ್ಯವಾದ ಅರ್ಪಿಸಿದ ಈ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶರಾದ ಶ್ರೀ ಮಾರುತಿ, ಮತ್ತು ಕಾಲೇಜಿನ ಉಪಪ್ರಾಂಶುಪಾಲೆ ಶ್ರೀಮತಿ ರಂಜನಾ ಕೆ. ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments