ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ಶಾಸ್ತ್ರೀಯ ಸಂಗೀತ ತರಗತಿ ಉದ್ಘಾಟನೆ ನಡೆಯಲಿದೆ. ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದ ಮುಂದಿನ ಲೋಕಾರ್ಪಣೆಯ ವರೆಗೆ ವಿವಿಧ ಕಲಾ ಸಾಂಸ್ಕೃತಿಕ, ಸಾಹಿತ್ಯ ವೈಭವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಇದರ ಅಂಗವಾಗಿ ನಾಳೆ ಅಂದರೆ ದಿನಾಂಕ 04.10.2022ನೇ ಮಂಗಳವಾರ ಮಧ್ಯಾಹ್ನ 3 ಘಂಟೆಗೆ ಶಾಸ್ತ್ರೀಯ ಸಂಗೀತ ತರಗತಿ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ.
ಸಂಗೀತ ಶಿಕ್ಷಕರಾಗಿ ಗಾನಭೂಷಣ ಶ್ರೀಮತಿ ಜಯಭಾರತಿ ವಿಷ್ಣುಪ್ರಕಾಶ್, ಕಾವುಮಠ ಇವರು ಸಂಗೀತ ತರಬೇತಿಯನ್ನು ನೀಡಲಿದ್ದಾರೆ. ಆಸಕ್ತರು ದಯವಿಟ್ಟು ಕೆಳಗಿನ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬೇಕಾಗಿ ಸಿರಿಬಾಗಿಲು ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.
ಫೋನ್ : 8073740237, 9448344380, 8547463158