ನಾಲ್ಕು ಜನರು (ಇಬ್ಬರು ಮಕ್ಕಳು) ಪ್ರಯಾಣಿಸುತ್ತಿದ್ದ ಬೈಕ್ ನ ಚಕ್ರ ಪಂಕ್ಚರ್ ಆಗಿ ನೆಲಕ್ಕೆ ಅಪ್ಪಳಿಸಿದ ರಭಸಕ್ಕೆ ಅದರಲ್ಲಿದ್ದ ಇಬ್ಬರು ಹುಡುಗಿಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಳಿದಿಬ್ಬರಿಗೆ ಗಂಭೀರ ಗಾಯಗಳಾಗಿದೆ.
ದಸರಾ ಹಬ್ಬದ ಕಾರಣ ರಜೆಯಿದ್ದುದರಿಂದ ಒಂದೇ ಕುಟುಂಬದ ನಾಲ್ವರು ಗ್ರಾಮಕ್ಕೆ ಬರುತ್ತಿದ್ದಾಗ ಚಲಿಸುತ್ತಿದ್ದ ದ್ವಿಚಕ್ರ ವಾಹನದ ಚಕ್ರ ಪಂಕ್ಚರ್ ಆಗಿದೆ. ಕೂಡಲೇ ಬೈಕ್ ರಭಸದಿಂದ ನೆಲಕ್ಕೆ ಬಿದ್ದ ಕಾರಣ ಆ ರಭಸಕ್ಕೆ ಓರ್ವ ಮಹಿಳೆ ಮತ್ತು ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಘಟನೆ ನಡೆದದ್ದು ನಿಪ್ಪಾಣಿ ತಾಲೂಕಿನ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕುರ್ಲಿ ಗ್ರಾಮದ ಹತ್ತಿರ. ಮಹಾರಾಷ್ಟ್ರದಲ್ಲಿ ಕೆಲಸ ಮಾಡುತ್ತಿದ್ದ ಕುಟುಂಬ ದಸರಾ ರಜೆಯಲ್ಲಿ ಊರಿಗೆ ಮರಳುತ್ತಿತ್ತು.
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಲಕ್ಷ್ಮೀ (25), ಭಾಗ್ಯಶ್ರೀ (13) ಎಂಬವರು ಮೃತಪಟ್ಟಿದ್ದಾರೆ. ರಾಮದುರ್ಗ ತಾಲೂಕಿನ ಕಟಕೋಳ ಗ್ರಾಮದ ಹಣಮಂತ ಸಕ್ರಿ (23), ಮಾರುತಿ ಚುನಾಮಾದಾರ (6) ಗಾಯಗೊಂಡವರು.
ಗಾಯಾಳುಗಳನ್ನು ನಿಪ್ಪಾಣಿಯಲ್ಲಿರುವ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ