ನಾಲ್ಕು ಜನರು (ಇಬ್ಬರು ಮಕ್ಕಳು) ಪ್ರಯಾಣಿಸುತ್ತಿದ್ದ ಬೈಕ್ ನ ಚಕ್ರ ಪಂಕ್ಚರ್ ಆಗಿ ನೆಲಕ್ಕೆ ಅಪ್ಪಳಿಸಿದ ರಭಸಕ್ಕೆ ಅದರಲ್ಲಿದ್ದ ಇಬ್ಬರು ಹುಡುಗಿಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಳಿದಿಬ್ಬರಿಗೆ ಗಂಭೀರ ಗಾಯಗಳಾಗಿದೆ.
ದಸರಾ ಹಬ್ಬದ ಕಾರಣ ರಜೆಯಿದ್ದುದರಿಂದ ಒಂದೇ ಕುಟುಂಬದ ನಾಲ್ವರು ಗ್ರಾಮಕ್ಕೆ ಬರುತ್ತಿದ್ದಾಗ ಚಲಿಸುತ್ತಿದ್ದ ದ್ವಿಚಕ್ರ ವಾಹನದ ಚಕ್ರ ಪಂಕ್ಚರ್ ಆಗಿದೆ. ಕೂಡಲೇ ಬೈಕ್ ರಭಸದಿಂದ ನೆಲಕ್ಕೆ ಬಿದ್ದ ಕಾರಣ ಆ ರಭಸಕ್ಕೆ ಓರ್ವ ಮಹಿಳೆ ಮತ್ತು ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಘಟನೆ ನಡೆದದ್ದು ನಿಪ್ಪಾಣಿ ತಾಲೂಕಿನ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕುರ್ಲಿ ಗ್ರಾಮದ ಹತ್ತಿರ. ಮಹಾರಾಷ್ಟ್ರದಲ್ಲಿ ಕೆಲಸ ಮಾಡುತ್ತಿದ್ದ ಕುಟುಂಬ ದಸರಾ ರಜೆಯಲ್ಲಿ ಊರಿಗೆ ಮರಳುತ್ತಿತ್ತು.
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಲಕ್ಷ್ಮೀ (25), ಭಾಗ್ಯಶ್ರೀ (13) ಎಂಬವರು ಮೃತಪಟ್ಟಿದ್ದಾರೆ. ರಾಮದುರ್ಗ ತಾಲೂಕಿನ ಕಟಕೋಳ ಗ್ರಾಮದ ಹಣಮಂತ ಸಕ್ರಿ (23), ಮಾರುತಿ ಚುನಾಮಾದಾರ (6) ಗಾಯಗೊಂಡವರು.
ಗಾಯಾಳುಗಳನ್ನು ನಿಪ್ಪಾಣಿಯಲ್ಲಿರುವ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
- ಇಮ್ರಾನ್ ಖಾನ್ ಜೀವಂತವಾಗಿದ್ದಾರೆಯೇ? ಜೈಲಿನಲ್ಲಿಯೇ ಸಾವಿನ ಸಂದೇಹ
- ನೆಟ್ಫ್ಲಿಕ್ಸ್ನ ‘ಲವ್ ಈಸ್ ಬ್ಲೈಂಡ್’ (Love Is Blind) ಈಗ ಬಹು ಜನಪ್ರಿಯ
- 3.7 ಮಿಲಿಯನ್ ಪೌಂಡ್ (47 ಕೋಟಿ ರೂಪಾಯಿ) ಮೌಲ್ಯದ ಫೆರಾರಿ ಕಾರು ಪೊಲೀಸ್ ಕಾರ್ಯಾಚರಣೆಯಲ್ಲಿ ವಶಕ್ಕೆ
- ಉಜಿರೆಯಲ್ಲಿ ಕೆಎಸ್ಆರ್ ಟಿಸಿ ಬಸ್ ಮತ್ತು ಬೈಕ್ ಢಿಕ್ಕಿ – ಯುವಕ ಸಾವು: UJIRE
- ಒಂದೇ ದೋಣಿಯಲ್ಲಿ ಕುಳಿತು ಇಂಗ್ಲಿಷ್ ಕಾಲುವೆಯನ್ನು ದಾಟಿದ 230 ಜನರು!

