ನಾಲ್ಕು ಜನರು (ಇಬ್ಬರು ಮಕ್ಕಳು) ಪ್ರಯಾಣಿಸುತ್ತಿದ್ದ ಬೈಕ್ ನ ಚಕ್ರ ಪಂಕ್ಚರ್ ಆಗಿ ನೆಲಕ್ಕೆ ಅಪ್ಪಳಿಸಿದ ರಭಸಕ್ಕೆ ಅದರಲ್ಲಿದ್ದ ಇಬ್ಬರು ಹುಡುಗಿಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಳಿದಿಬ್ಬರಿಗೆ ಗಂಭೀರ ಗಾಯಗಳಾಗಿದೆ.
ದಸರಾ ಹಬ್ಬದ ಕಾರಣ ರಜೆಯಿದ್ದುದರಿಂದ ಒಂದೇ ಕುಟುಂಬದ ನಾಲ್ವರು ಗ್ರಾಮಕ್ಕೆ ಬರುತ್ತಿದ್ದಾಗ ಚಲಿಸುತ್ತಿದ್ದ ದ್ವಿಚಕ್ರ ವಾಹನದ ಚಕ್ರ ಪಂಕ್ಚರ್ ಆಗಿದೆ. ಕೂಡಲೇ ಬೈಕ್ ರಭಸದಿಂದ ನೆಲಕ್ಕೆ ಬಿದ್ದ ಕಾರಣ ಆ ರಭಸಕ್ಕೆ ಓರ್ವ ಮಹಿಳೆ ಮತ್ತು ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಘಟನೆ ನಡೆದದ್ದು ನಿಪ್ಪಾಣಿ ತಾಲೂಕಿನ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕುರ್ಲಿ ಗ್ರಾಮದ ಹತ್ತಿರ. ಮಹಾರಾಷ್ಟ್ರದಲ್ಲಿ ಕೆಲಸ ಮಾಡುತ್ತಿದ್ದ ಕುಟುಂಬ ದಸರಾ ರಜೆಯಲ್ಲಿ ಊರಿಗೆ ಮರಳುತ್ತಿತ್ತು.
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಲಕ್ಷ್ಮೀ (25), ಭಾಗ್ಯಶ್ರೀ (13) ಎಂಬವರು ಮೃತಪಟ್ಟಿದ್ದಾರೆ. ರಾಮದುರ್ಗ ತಾಲೂಕಿನ ಕಟಕೋಳ ಗ್ರಾಮದ ಹಣಮಂತ ಸಕ್ರಿ (23), ಮಾರುತಿ ಚುನಾಮಾದಾರ (6) ಗಾಯಗೊಂಡವರು.
ಗಾಯಾಳುಗಳನ್ನು ನಿಪ್ಪಾಣಿಯಲ್ಲಿರುವ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

