ಉಪ್ಪಿನಂಗಡಿ ರಾಮನಗರದ ಶ್ರೀ ಶಾರದಾ ಕಲಾಮಂಟಪದಲ್ಲಿ 28ನೇ ವರ್ಷದ ಸಾರ್ವಜನಿಕ ಶಾರದೋತ್ಸವದ ಪ್ರಯುಕ್ತ ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಯಕ್ಷಗಾನ ಕಲಾ ಸೇವಾ ಸಂಘದ ಸದಸ್ಯರಿಂದ ‘ತರಣಿಸೇನ ಕಾಳಗ’ ತಾಳಮದ್ದಳೆ ಜರಗಿತು.
ಭಾಗವತರಾಗಿ ಪದ್ಮನಾಭ ಕುಲಾಲ್, ಶ್ರೀಮತಿ ಮಲ್ಲಿಕಾ ಶೆಟ್ಟಿ ಸಿದ್ಧಕಟ್ಟೆ ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ ಮತ್ತು ಗುರುಮೂರ್ತಿ ಅಮ್ಮಣ್ಣಾಯ, ಅರ್ಥಧಾರಿಗಳಾಗಿ ಅಂಬಾಪ್ರಸಾದ್ ಪಾತಾಳ(ತರಣಿಸೇನ) ಗುಡ್ಡಪ್ಪ ಬಲ್ಯ(ರಾವಣ) ತಿಲಕಾಕ್ಷ(ರಾವಣದೂತ) ಶ್ರೀಮತಿ ಪುಷ್ಪಲತಾ .ಎಂ(ಸರಮೆ) ವಿಜಯಕುಮಾರ್ ಕೊಯ್ಯುರು(ಸುಪಾಶ್ವಕ) ಸಂಜೀವ ಪಾರೆಂಕಿ(ವಿಭೀಷಣ) ದಿವಾಕರ ಆಚಾರ್ಯ ನೇರೆಂಕಿ (ತರಣಿಸೇನ) ದಿವಾಕರ್ ಆಚಾರ್ಯ ಗೇರುಕಟ್ಟೆ(ಶ್ರೀರಾಮ) ಭಾಗವಹಿಸಿದ್ದರು.
ಶ್ರೀ ಶಾರದೋತ್ಸವ ಸಮಿತಿಯ ಗೌರವ ಅಧ್ಯಕ್ಷರಾದ ಉಮೇಶ ಶೆಣೈ .ಯನ್, ಸಮಿತಿಯ ಪದಾಧಿಕಾರಿಗಳಾದ ವಿಶ್ವನಾಥ ಶೆಟ್ಟಿ ಕಂಗ್ವೆ ಪುಷ್ಪರಾಜ ಶೆಟ್ಟಿ, ಜಯಂತ ಪುರೋಳಿ, ಶ್ರೀಮತಿ ಶಾಮಲಾ ಶೆಣೈ ಕಲಾವಿದರನ್ನು ಗೌರವಿಸಿದರು. ಸಂಘದ ಹಿರಿಯ ಸದಸ್ಯ ಬಿ. ಸುಬ್ರಹ್ಮಣ್ಯರಾವ್ ಉಪಸ್ಥಿತರಿದ್ದರು.
ಶ್ರೀ ಕಾಳಿಕಾಂಬ ಯಕ್ಷಗಾನ ಸಂಘದ ಅಧ್ಯಕ್ಷರಾದ ದಿವಾಕರ್ ಆಚಾರ್ಯ ಗೇರುಕಟ್ಟೆ ಸ್ವಾಗತಿಸಿ ವಂದಿಸಿದರು.
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
ನಿಮ್ಮೂರಿನ ಸುದ್ದಿಗಳನ್ನು, ಸಮಸ್ಯೆಗಳನ್ನು ಪ್ರಕಟಿಸಬೇಕಾದಲ್ಲಿ ಫೋಟೋ ಸಮೇತ ಸುದ್ದಿಗಳನ್ನು ವಾಟ್ಸಾಪ್ ಮಾಡಿ – 9164828688

