ಉಪ್ಪಿನಂಗಡಿ ರಾಮನಗರದ ಶ್ರೀ ಶಾರದಾ ಕಲಾಮಂಟಪದಲ್ಲಿ 28ನೇ ವರ್ಷದ ಸಾರ್ವಜನಿಕ ಶಾರದೋತ್ಸವದ ಪ್ರಯುಕ್ತ ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಯಕ್ಷಗಾನ ಕಲಾ ಸೇವಾ ಸಂಘದ ಸದಸ್ಯರಿಂದ ‘ತರಣಿಸೇನ ಕಾಳಗ’ ತಾಳಮದ್ದಳೆ ಜರಗಿತು.
ಭಾಗವತರಾಗಿ ಪದ್ಮನಾಭ ಕುಲಾಲ್, ಶ್ರೀಮತಿ ಮಲ್ಲಿಕಾ ಶೆಟ್ಟಿ ಸಿದ್ಧಕಟ್ಟೆ ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ ಮತ್ತು ಗುರುಮೂರ್ತಿ ಅಮ್ಮಣ್ಣಾಯ, ಅರ್ಥಧಾರಿಗಳಾಗಿ ಅಂಬಾಪ್ರಸಾದ್ ಪಾತಾಳ(ತರಣಿಸೇನ) ಗುಡ್ಡಪ್ಪ ಬಲ್ಯ(ರಾವಣ) ತಿಲಕಾಕ್ಷ(ರಾವಣದೂತ) ಶ್ರೀಮತಿ ಪುಷ್ಪಲತಾ .ಎಂ(ಸರಮೆ) ವಿಜಯಕುಮಾರ್ ಕೊಯ್ಯುರು(ಸುಪಾಶ್ವಕ) ಸಂಜೀವ ಪಾರೆಂಕಿ(ವಿಭೀಷಣ) ದಿವಾಕರ ಆಚಾರ್ಯ ನೇರೆಂಕಿ (ತರಣಿಸೇನ) ದಿವಾಕರ್ ಆಚಾರ್ಯ ಗೇರುಕಟ್ಟೆ(ಶ್ರೀರಾಮ) ಭಾಗವಹಿಸಿದ್ದರು.
ಶ್ರೀ ಶಾರದೋತ್ಸವ ಸಮಿತಿಯ ಗೌರವ ಅಧ್ಯಕ್ಷರಾದ ಉಮೇಶ ಶೆಣೈ .ಯನ್, ಸಮಿತಿಯ ಪದಾಧಿಕಾರಿಗಳಾದ ವಿಶ್ವನಾಥ ಶೆಟ್ಟಿ ಕಂಗ್ವೆ ಪುಷ್ಪರಾಜ ಶೆಟ್ಟಿ, ಜಯಂತ ಪುರೋಳಿ, ಶ್ರೀಮತಿ ಶಾಮಲಾ ಶೆಣೈ ಕಲಾವಿದರನ್ನು ಗೌರವಿಸಿದರು. ಸಂಘದ ಹಿರಿಯ ಸದಸ್ಯ ಬಿ. ಸುಬ್ರಹ್ಮಣ್ಯರಾವ್ ಉಪಸ್ಥಿತರಿದ್ದರು.
ಶ್ರೀ ಕಾಳಿಕಾಂಬ ಯಕ್ಷಗಾನ ಸಂಘದ ಅಧ್ಯಕ್ಷರಾದ ದಿವಾಕರ್ ಆಚಾರ್ಯ ಗೇರುಕಟ್ಟೆ ಸ್ವಾಗತಿಸಿ ವಂದಿಸಿದರು.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
ನಿಮ್ಮೂರಿನ ಸುದ್ದಿಗಳನ್ನು, ಸಮಸ್ಯೆಗಳನ್ನು ಪ್ರಕಟಿಸಬೇಕಾದಲ್ಲಿ ಫೋಟೋ ಸಮೇತ ಸುದ್ದಿಗಳನ್ನು ವಾಟ್ಸಾಪ್ ಮಾಡಿ – 9164828688

