ಹವ್ಯಾಸಿ ಯಕ್ಷಗಾನ ಕಲಾವಿದೆ ಶ್ರೀಮತಿ ಶೋಭಾ ಐತಾಳ್ ಅವರನ್ನು ಶ್ರೀ ವಾಗೀಶ್ವರೀ ಯಕ್ಷಗಾನ ಕಲಾವರ್ಧಕ ಸಂಘದ ದಸರಾ ವಾರ್ಷಿಕ ಬಯಲಾಟ ವೇದಿಕೆಯಲ್ಲಿ ಸಂಮಾನಿಸಲಾಯತು.
ಕಳೆದ ಹನ್ನೆರಡು ವರ್ಷಗಳಿಂದ ಯಕ್ಷಗಾನ ವೇಷ ,ಭಾಗವತಿಕೆಯಲ್ಲಿ ಪ್ರಾವೀಣ್ಯತೆ ಸಾಧಿಸಿ ವಾಗೀಶ್ವರೀ ಸಂಘದ ವಾರದ ಕೂಟದಲ್ಲಿ ನಿರಂತರವಾಗಿ ಭಾಗವಹಿಸುತ್ತಿರುವ ಶಿಕ್ಷಕಿ ,ನಿರೂಪಕಿ ,ಸಂಘಟಕಿ ಶೋಭಾ ಅವರ ಬದ್ದತೆ, ರಂಗ ನಿಷ್ಠೆಯನ್ನು ನೆನಪಿಸಿ ಶಿವಪ್ರಸಾದ್ ಪ್ರಭು ಅಭಿನಂದಿಸಿದರು.
“ಮಂಗಳೂರಿನ ಕುಡ್ತೇರಿ ಮಹಾಮಾಯಾ ದೇವಸ್ಥಾನದಲ್ಲಿ ಮಂಗಳೂರು ಶಾರದೋತ್ಸವ ಮೆರವಣಿಗೆಯ ಸಂದರ್ಭದಲ್ಲಿ ವರ್ಷಂಪ್ರತಿ ವಾಗೀಶ್ವರೀ ಸಂಘದ ಕಲಾವಿದರು ಯಕ್ಷಗಾನ ಬಯಲಾಟ ಪ್ರದರ್ಶನದ ಸಂಧರ್ಭದಲ್ಲಿ ಸಂಘದ ಕಲಾವಿದರನ್ನು ಸಂಮಾನಿಸುವ ಪರಂಪರೆ ನಾಲ್ಕು ದಶಕಗಳಿಂದ ಮುಂದುವರಿಯುತ್ತಿದೆ. ಈ ಸಂಘದ ಮೂಲಕ ಹಲವಾರು ಕಲಾವಿದರು ಸಿದ್ಧಿ ಪ್ರಸಿದ್ದಿ ಪಡೆದಿದ್ದಾರೆ ” ಎಂದು ಕ್ಷೇತ್ರದ ಅರ್ಚಕ ವಾಸುದೇವ ಭಟ್ ಶುಭಾಶೀರ್ಬಾದ ಮಾಡಿದರು.
ಬಳಿಕ ಶಿಷ್ಯ ವೃಂದದವರಿಂದ ಯಕ್ಷ ಗುರು ಅಶೋಕ್ ಬೋಳೂರು ಅವರಿಗೆ ಸನ್ಮಾನ ಮತ್ತು ಗೌರವಾರ್ಪಣೆ ನಡೆಯಿತು.
ಮಹಾಮಾಯಾ ದೇವಳದ ಅಂಗಣದಲ್ಲಿ ನಾಲ್ಕು ದಶಕಗಳ ಪೂರ್ವದಲ್ಲಿ ವಾಗೀಶ್ವರೀ ಸಂಘದ ಇದೇ ವೇದಿಕೆಯಲ್ಲಿ ತನ್ನ ಮೊದಲ ಸಾರ್ವಜನಿಕ ಭಾಷಣದ ನೆನಪು ಮಾಡಿಕೊಂಡ ಸಂಘದ ಗೌರವಾಧ್ಯಕ್ಷ ಪ್ರದೀಪ ಕುಮಾರ ಕಲ್ಕೂರ ಅವರು .ಎನ್.ಮಾಧವ ಆಚಾರ್ಯ , ನರಸಿಂಹ ಪ್ರಭು , ಶ್ರೀನಿವಾಸ ಭಟ್ ಮೊದಲಾದ ಕೀರ್ತಿಶೇಷ ಹಿರಿಯರ ಕೊಡುಗೆಯನ್ನು ಸ್ಮರಿಸಿದರು.
ಸಂಘದ ಸಂಚಾಲಕರಾದ ಕದ್ರಿ ನವನೀತ ಶೆಟ್ಟಿ ಮತ್ತು ಪಿ.ಸಂಜಯ ಕುಮಾರ್ ರಾವ್ ಕಾರ್ಯಕ್ರಮ ಸಂಯೋಜಿಸಿ ನಿರೂಪಿಸಿದರು.
ಸಂಘದ ಅಧ್ಯಕ್ಷ ಶ್ರೀನಾಥ್ ಎನ್.ಪ್ರಭು , ಉಪಾಧ್ಯಕ್ಷೆ ಪ್ರಪುಲ್ಲ ನಾಯಕ್ , ಅಶೋಕ್ ಬೋಳೂರು , ಪ್ರಭಾಕರ ಕಾಮತ್ , ಪ್ರೀತಂ ಸೇರಾಜೆ ಉಪಸ್ಥಿತರಿದ್ದರು.
ಶೋಭಾ ಐತಾಳ್ ಅವರ ದಾಕ್ಷಾಯಿಣಿ ಪಾತ್ರನಿರ್ವಹಣೆಯ “ಶಿವಶಕ್ತಿ” ಹಾಗೂ ಕದ್ರಿ ನವನೀತ ಶೆಟ್ಟಿ ರಚನೆಯ “ಶ್ರೀ ದೇವಿ ಮಾರಿಯಮ್ಮ” ಯಕ್ಷಗಾನ ಬಯಲಾಟ ಜರಗಿತು.

- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
ನಿಮ್ಮೂರಿನ ಸುದ್ದಿಗಳನ್ನು, ಸಮಸ್ಯೆಗಳನ್ನು ಪ್ರಕಟಿಸಬೇಕಾದಲ್ಲಿ ಫೋಟೋ ಸಮೇತ ಸುದ್ದಿಗಳನ್ನು ವಾಟ್ಸಾಪ್ ಮಾಡಿ – 9164828688 ಅಥವಾ ಈ-ಮೈಲ್ ಮಾಡಿ – [email protected]

