ಅವಿವಾಹಿತ ಯುವತಿಯೊಬ್ಬಳು ತನ್ನ ಮನೆಯ ಸಮೀಪವಿರುವ ಕೆರೆಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ನಿಧನಹೊಂದಿದ್ದಾಳೆ.
ಕಾರ್ಕಳ ಸಮೀಪದ ನಾರಾವಿ ಗ್ರಾಮ ಪಂಚಾಯಿತ್ ಸದಸ್ಯ ಹಾಗೂ ಅರಸೀಕಟ್ಟೆ ನಿವಾಸಿ ರಾಜವರ್ಮ ಜೈನ್ ಅವರ ಪುತ್ರಿ ಸುರಕ್ಷಾ ಜೈನ್ (23) ಮೃತ ಯುವತಿ.ಕಳೆದ ವರ್ಷವಷ್ಟೇ ರಕ್ಷಾ ಜೈನ್ ಡಿಗ್ರಿ ಮುಗಿಸಿ ಮನೆಯಲ್ಲಿದ್ದರು.
ಸುರಕ್ಷಾ ಜೈನ್ ತನ್ನ ಚಿಕ್ಕಪ್ಪನ ಮನೆಗೆ ಹೋಗಿದ್ದಳು. ಅಲ್ಲಿಂದ ಹಿಂತಿರುಗುತ್ತಿದ್ದಾಗ ಆಕಸ್ಮಿಕವಾಗಿ ಕೆರೆಗೆ ಬಿದ್ದಿದ್ದಾಳೆ.ರಕ್ಷಣೆಗೆಂದು ಆಕೆಯ ಸಹೋದರ ತಕ್ಷಣ ಕೆರೆಗೆ ಹಾರಿದರೂ ಆಕೆಯನ್ನು ರಕ್ಷಿಸಲಾಗಲಿಲ್ಲ.
ಮೃತ ಸುರಕ್ಷಾ ಜೈನ್ ಅವರ ತಂದೆ ರಾಜವರ್ಮ ಜೈನ್ ಕೂಡ ಆಘಾತದಿಂದ ಕುಸಿದು ಬಿದ್ದಿದ್ದು, ಅವರನ್ನು ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ನಿಮ್ಮೂರಿನ ಸುದ್ದಿಗಳನ್ನು, ಸಮಸ್ಯೆಗಳನ್ನು ಪ್ರಕಟಿಸಬೇಕಾದಲ್ಲಿ ಫೋಟೋ ಸಮೇತ ಸುದ್ದಿಗಳನ್ನು ವಾಟ್ಸಾಪ್ ಮಾಡಿ – 9164828688 ಅಥವಾ ಈ-ಮೈಲ್ ಮಾಡಿ – [email protected]