ಹನ್ನೊಂದನೆಯ ವರ್ಷದ ಸರ್ಪಂಗಳ ಯಕ್ಷೋತ್ಸವ ಮತ್ತು ಸರ್ಪಂಗಳ ಪ್ರಶಸ್ತಿ ಪ್ರದಾನ ಸಮಾರಂಭವು ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಅಕ್ಟೋಬರ್ 15, 2022 ರಂದು ರಾತ್ರಿ 9.00 ಗಂಟೆಗೆ ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರ ದಿವ್ಯೋಪಸ್ಥಿತಿಯಲ್ಲಿ ಜರಗಲಿದೆ.
ಸಂಜೆ 6.00 ರಿಂದ 11.00ರವರೆಗೆ ‘ಹನುಮೋದ್ಭವ ಮಾರಣಾಧ್ವರ’ ಯಕ್ಷಗಾನ ಪ್ರಸ್ತುತಗೊಳ್ಳಲಿದೆ.
2022ನೆಯ ಸಾಲಿನ‘ಸರ್ಪಂಗಳ ಸುಬ್ರಹ್ಮಣ್ಯ ಭಟ್ ಸ್ಮಾರಕ ಯಕ್ಷಗಾನ ಸಾಧಕ ಪ್ರಶಸ್ತಿ’ಯನ್ನು ಪಿ.ಟಿ. ಜಯರಾಮ ಭಟ್ ಅವರಿಗೆ ನೀಡಲಾಗುತ್ತಿದೆ. ಪ್ರಸಿದ್ಧ ಪದ್ಯಾಣ ಮನೆತನದ ಜಯರಾಮ ಭಟ್ಟರು ಸುಮಾರು ಮೂರು ದಶಕಗಳ ಕಾಲ ವಿವಿಧ ಮೇಳಗಳಲ್ಲಿ ಭಾಗವತರಾಗಿ, ಮದ್ದಲೆವಾದಕರಾಗಿ ತಿರುಗಾಟ ನಡೆಸಿದ ಅನುಭವ ಉಳ್ಳವರು.
ಈ ವರ್ಷದ‘ಸರ್ಪಂಗಳ ಕಲಾಸೇವಾ ಪುರಸ್ಕಾರ’ವನ್ನು ಕಟೀಲು ಮೇಳದಲ್ಲಿ ಸುಮಾರು ಐದು ದಶಕಗಳ ಕಾಲ ನೇಪಥ್ಯ ಕಲಾವಿದರಾಗಿ ಸೇವೆ ಸಲ್ಲಿಸಿದ ಪುತ್ತು ನಾಯ್ಕ ಬಸಕೋಡಿ ಇವರಿಗೆ ನೀಡಲಾಗುತ್ತಿದೆ.
ಅಂದು ಜರಗಲಿರುವ ಸಮಾರಂಭದಲ್ಲಿ ಪರ್ಯಾಯ ಶ್ರೀಪಾದರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ‘ಸರ್ಪಂಗಳ ಯಕ್ಷೋತ್ಸವ’ದ ಆಯೋಜಕರಾದ ಡಾ.ಶೈಲಜಾ ಎಸ್. ಮತ್ತು ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಲಿ ಕಡೆಕಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮೂರಿನ ಸುದ್ದಿಗಳನ್ನು, ಸಮಸ್ಯೆಗಳನ್ನು ಪ್ರಕಟಿಸಬೇಕಾದಲ್ಲಿ ಫೋಟೋ ಸಮೇತ ಸುದ್ದಿಗಳನ್ನು ವಾಟ್ಸಾಪ್ ಮಾಡಿ – 9164828688 ಅಥವಾ ಈ-ಮೈಲ್ ಮಾಡಿ – [email protected]
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

