ಕೊಳ್ನಾಡು ಕಾಡುಮಠ ಎಂಬಲ್ಲಿರುವ ಆಟೋ ಚಾಲಕರ ಪುತ್ರಿಯೊಬ್ಬಳು ಕಾಣೆಯಾದ ವಿಚಾರಕ್ಕೆ ಸಂಬಂಧಿಸಿ ವಿಟ್ಲ ಠಾಣೆಯಲ್ಲಿ ಕೇಸು ದಾಖಲಾಗಿದೆ. ಆಟೋ ಚಾಲಕರ ಪುತ್ರಿ ಮುಸ್ಲಿಂ ಯುವತಿ ಸೋಮವಾರ ಬೆಳಗ್ಗೆಯಿಂದ ನಾಪತ್ತೆಯಾಗಿದ್ದಳು.
ಆದರೆ ಕಾಸರಗೋಡಿನ ಸ್ನೇಹಿತೆಯೊಂದಿಗೆ ತೆರಳಿದ್ದ ಯುವತಿ ಮನೆಗೆ ಹಿಂದಿರುಗುತ್ತಿದ್ದಾಗ ಮನೆಯಲ್ಲಿ ಬೈಗುಳ ಮತ್ತು ಆಕ್ಷೇಪಗಳಿಗೆ ಹೆದರಿ ಪುನಃ ವಿಟ್ಲ ಪೇಟೆಗೆ ಬಂದಿದ್ದಳು.
ಯುವತಿಯರಿಬ್ಬರು ಒಟ್ಟಿಗೆ ಹೋದ ವಿಚಾರವನ್ನು ತಿಳಿದ ಸಾಲೆತ್ತೂರು ಮತ್ತು ಕಾಡುಮಠದ ಮುಸ್ಲಿಂ ಯುವಕರ ಗುಂಪು ಒಟ್ಟು ಸೇರಿ ವಿಟ್ಲಕ್ಕೆ ಧಾವಿಸಿತು. ಅಲ್ಲಿ ಪೇಟೆಯಲ್ಲಿ ಈ ಯುವಕರ ಗುಂಪು ಈ ಇಬ್ಬರು ಯುವತಿಯರಿಗಾಗಿ ಹುಡುಕಾಡತೊಡಗಿತು.
ಆದರೆ ಅಲ್ಲಿ ಇಬ್ಬರು ಬುರ್ಖಾ ಧರಿಸಿದ ಯುವತಿಯರು ಈ ಗುಂಪಿನ ಕಣ್ಣಿಗೆ ಬಿದ್ದರು. ಆದರೆ ಈ ಯುವತಿಯರು ಕುದ್ದುಪದವಿನವರಾಗಿದ್ದರು. ಕಾಣೆಯಾದ ಯುವತಿಯರೆಂದು ಭಾವಿಸಿ ಮುಸ್ಲಿಂ ಯುವಕರ ಗುಂಪು ಅವರ ಮೇಲೆ ಹಲ್ಲೆ ಮಾಡಿತು.
“ನಾವು ಆಟೋ ಚಾಲಕರ ಪುತ್ರಿಯಲ್ಲ, ನಾವು ಕುದ್ದುಪದವಿನವರು” ಎಂದು ಪರಿಪರಿಯಾಗಿ ಆ ಯುವತಿಯರು ಹೇಳಿದರೂ ಕೇಳದ ಗುಂಪು ಅವರ ಮೈಮೇಲೆ ಕೈಹಾಕಿ ಅಸಭ್ಯವಾಗಿ ವರ್ತಿಸಿತ್ತು.
ಕೂಡಲೇ ಅಲ್ಲಿಗೆ ಬಂದ ವಿಟ್ಲ ಪೊಲೀಸರು ಮುಸ್ಲಿಂ ಯುವಕರಲ್ಲಿ ಅವರಲ್ಲಿ ಓರ್ವನನ್ನು ವಶಕ್ಕೆ ಪಡೆದು ಕುದ್ದುಪದವಿನ ಯುವತಿಯರನ್ನು ಮನೆಗೆ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಕುದ್ದುಪದವಿನ ಯುವತಿಯರ ಮನೆಯವರು ಠಾಣೆಯಲ್ಲಿ ದೂರು ನೀಡಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.
ನಿಮ್ಮೂರಿನ ಸುದ್ದಿಗಳನ್ನು, ಸಮಸ್ಯೆಗಳನ್ನು ಪ್ರಕಟಿಸಬೇಕಾದಲ್ಲಿ ಫೋಟೋ ಸಮೇತ ಸುದ್ದಿಗಳನ್ನು ವಾಟ್ಸಾಪ್ ಮಾಡಿ – 9164828688 ಅಥವಾ ಈ-ಮೈಲ್ ಮಾಡಿ – [email protected]
- ಪಾತಾಳ ಅಂಬಾಪ್ರಸಾದರಿಗೆ 60ರ ಅಭಿನಂದನೆ ಮತ್ತು ತಾಳಮದ್ದಳೆ
- ಗುರುರಾಜ ಮಾರ್ಪಳ್ಳಿಯವರಿಗೆ ಯಕ್ಷವಿದ್ವಾಂಸ ಪ್ರಶಸ್ತಿ
- ‘ದ್ಯೂತ ಪ್ರಕರಣ’ – ಯಕ್ಷಗಾನ ತಾಳಮದ್ದಳೆ ಪ್ರದರ್ಶನವು
- ಹಂದೆ ಶ್ರೀ ವಿಷ್ಣುಮೂರ್ತಿ ಶ್ರೀ ವಿನಾಯಕ ದೇವಸ್ಥಾನದ ರಥೋತ್ಸವ – “ಸುದರ್ಶನ ಗರ್ವಭಂಗ” ಮತ್ತು ಗದಾಯುದ್ಧ, ಚಂದ್ರಾವಳಿ ವಿಲಾಸ” ಯಕ್ಷಗಾನ ಪ್ರದರ್ಶನ
- ಪತಿಯನ್ನು ಕಟ್ಟಿಹಾಕಿ, ಸಿಗರೇಟ್ನಿಂದ ಆತನ ಖಾಸಗಿ ಅಂಗಗಳನ್ನು ಸುಟ್ಟು, ಜನನಾಂಗಗಳನ್ನು ಕತ್ತರಿಸಲು ಪ್ರಯತ್ನಿಸಿದ ಹೆಂಡತಿಯ ಬಂಧನ