ಜ್ಞಾನವಾಪಿ ಮಸೀದಿ ಸಮಸ್ಯೆಯ ಬಗ್ಗೆ ಇದೀಗ ವಾರಣಾಸಿ ನ್ಯಾಯಾಲಯ ತೀರ್ಪು ನೀಡಿದೆ.
ಮಸೀದಿ ಸಂಕೀರ್ಣದಲ್ಲಿರುವ ಶಿವಲಿಂಗದ ಕಾರ್ಬನ್ ಡೇಟಿಂಗ್ ಮತ್ತು ವೈಜ್ಞಾನಿಕ ತನಿಖೆಯನ್ನು ಕೋರಿ ಹಿಂದೂ ಕಡೆಯ ಬೇಡಿಕೆಯನ್ನು ವಾರಣಾಸಿ ನ್ಯಾಯಾಲಯ ತಿರಸ್ಕರಿಸಿದೆ.
ಈ ಬೇಡಿಕೆಯನ್ನು ವಾರಣಾಸಿ ನ್ಯಾಯಾಲಯವು ಅಮಾನ್ಯಗೊಳಿಸಿದೆ. ಈ ಮೊದಲು ಹಿಂದೂ ಮುಖಂಡರು ಸಲ್ಲಿಸಿದ್ದ ಅರ್ಜಿಯ ಮೇಲೆ ವಾರಣಾಸಿ ನ್ಯಾಯಾಲಯವು ವಾದ ಪ್ರತಿವಾದಗಳನ್ನು ಆಲಿಸಿ ತನ್ನ ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು.
ಇದೀಗ ಬಂದ ತೀರ್ಪಿನ ಪ್ರಕಾರ ಮಸೀದಿ ಸಂಕೀರ್ಣದಲ್ಲಿರುವ ಶಿವಲಿಂಗದ ಕಾರ್ಬನ್ ಡೇಟಿಂಗ್ ಮತ್ತು ವೈಜ್ಞಾನಿಕ ತನಿಖೆಯನ್ನು ಕೋರಿ ಹಿಂದೂ ಕಡೆಯ ಬೇಡಿಕೆಯನ್ನು ವಾರಣಾಸಿ ನ್ಯಾಯಾಲಯ ತಿರಸ್ಕರಿಸಿದೆ ಎಂದು ತಿಳಿದುಬಂದಿದೆ.